AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ಆಸ್ತಿ ವಿವಾದ: ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ

ಕರ್ನಾಟಕದಲ್ಲಿ ವಕ್ಫ್ ಬೋರ್ಡ್ ಭೂಮಿ ವಿವಾದ ಜೋರಾಗಿದ್ದು, ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ನಮೂದಿಸಿದ್ದನ್ನು ತೆರವು ಮಾಡಿದೆ. ಆ ಮೂಲಕ ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ ಸಿಕ್ಕಂತ್ತಾಗಿದೆ. ಇತರೆ ರೈತರ ಪಹಣಿಯಲ್ಲಿಯೂ ಇದೇ ರೀತಿ ವಕ್ಪ್ ಬೋರ್ಡ್ ಎಂಬುದನ್ನು ತೆಗೆಯಲು ಮನವಿ ಮಾಡಿದ್ದಾರೆ.

ವಕ್ಫ್ ಆಸ್ತಿ ವಿವಾದ: ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ
ವಕ್ಫ್ ಆಸ್ತಿ ವಿವಾದ: ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 30, 2024 | 12:02 PM

Share

ವಿಜಯಪುರ, ಅಕ್ಟೋಬರ್​ 30: ಕರ್ನಾಟಕದಲ್ಲಿ ವಕ್ಫ್ (Waqf) ಬೋರ್ಡ್ ಆಸ್ತಿ ವಿವಾದ ಭುಗಿಲೆದ್ದಿದೆ. ಇಂದು ಸಾಕಷ್ಟು ರೈತರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಇದೆಲ್ಲದರ ಮಧ್ಯೆ ಪಹಣಿಯಲ್ಲಿ ನಮೂದಾಗಿದ್ದ ಕರ್ನಾಟಕ ವಕ್ಫ್​​ ಬೋರ್ಡ್​ ಪದವನ್ನು ರಾತ್ರೋ ರಾತ್ರಿ ಕಂದಾಯ‌ ಇಲಾಖೆಯ ಅಧಿಕಾರಿಗಳು ತೆರವು ಮಾಡಿದ್ದಾರೆ. ಆ ಮೂಲಕ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ.

ರೈತರ ಪಹಣಿಯ ಕಾಲಂ ನಂಬರ್ 11ರಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿದ್ದ ಪದವನ್ನು ಕಂದಾಯ ಅಧಿಕಾರಿಗಳು‌ ಬದಲಾವಣೆ ಮಾಡಿದ್ದಾರೆ. ಅಕ್ಟೋಬರ್​ 9ರಂದು ತೆನೆಹಳ್ಳಿ ಗ್ರಾಮದ ರೈತ ಯಮನಪ್ಪ ಕೆಂಗನಾಳ ಅವರ ಜಮೀನಿನ ಪಹಣಿಯಲ್ಲಿ ನೋಟೀಸ್ ನೀಡದೇ ಪಹಣಿಯ ಕಾಲಂ ನಂಬರ್ 11ರಲ್ಲಿ ಕರ್ನಾಟಕ ವಕ್ಫ್ ಬೋರ್ಡ್ ಎಂದು ನಮೂದಿಸಿದ್ದರು. ಇದೀಗ ಯಮನಪ್ಪ ಕೆಂಗನಾಳ ಜಮೀನಿನಲ್ಲಿದ್ದ ಕರ್ನಾಟಕ ವಕ್ಫ್ ಬೋರ್ಡ್ ಎಂಬ ಪದವನ್ನು ಅಧಿಕಾರಿಗಳು ಕೈಬಿಟ್ಟಿದ್ದಾರೆ. ಹೀಗಾಗಿ ರೈತರಲ್ಲಿ ಸಂತಸ ಮೂಡಿದೆ.

ಇದನ್ನೂ ಓದಿ: ವಕ್ಫ್​ ಆಸ್ತಿ ವಿವಾದ: ರೈತರಿಗೆ ನೀಡಿದ ನೋಟಿಸ್​ ಸಮರ್ಥಿಸಿಕೊಂಡ ಸಚಿವ ಜಮೀರ್

ಇಂಡಿ ತಾಲ್ಲೂಕಿನ 41 ರೈತರ ಜಮೀನಿಗಳ ನೋಟಿಸ್ ನೀಡದೇ ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ತಹಶೀಲ್ದಾರ್ ನಮೂದಿಸಿದ್ದಾರೆ. ಇತರೆ ರೈತರ ಪಹಣಿಯಲ್ಲಿಯೂ ಇದೇ ರೀತಿ ವಕ್ಪ್ ಬೋರ್ಡ್ ಎಂಬುದನ್ನು ತೆಗೆಯಲು ಮನವಿ ಮಾಡಿದ್ದಾರೆ.

ಇನ್ನು ನಿನ್ನೆ ಸಾಯಂಕಾಲದಿಂದಲೇ ಡಿಸಿ ಕಚೇರಿ ಆವರಣದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ. ಓರ್ವ ಎಸ್​ಪಿ, ಇಬ್ಬರು ಅಡಿಷನಲ್ ಎಸ್​ಪಿ, ಇಬ್ಬರು ಡಿವೈಎಸ್ಪಿ, ನಾಲ್ವರು ಪೊಲೀಸ್ ಇನ್ಸ್‌ಪೆಕ್ಟರ್, ಆರು ಜನ ಸಬ್‌ಇನ್ಸ್‌ಪೆಕ್ಟರ್‌ ಎಚ್ಪಿಸಿ ಹಾಗೂ 50 ಪಿಸಿ ಸಿಬ್ಬಂದಿ ಮತ್ತು ಎರಡು ಡಿಆರ್​ ತುಕಡಿಗಳನ್ನು ಬದ್ಧತೆಗಾಗಿ ನಿಯೋಜನೆ ಮಾಡಲಾಗಿದೆ.

ಬಿಜೆಪಿ ಸತ್ಯಶೋಧನ ತಂಡ ಭೇಟಿ: ಪರಿಶೀಲನೆ 

ಬಿಜೆಪಿ ಸಂಸದ ಗೋವಿಂದ ಕಾರಜೋಳ ನೇತೃತ್ವದ ನಿಯೋಗ ನಿನ್ನೆ ವಿಜಯಪುರಕ್ಕೆ ಭೇಟಿ ಕೊಟ್ಟಿದೆ. ಸಿಂದಗಿ ವಿರಕ್ತ ಮಠದಲ್ಲಿ ರೈತರ ಅಹವಾಲು ಸ್ವೀಕರಿಸಿದೆ. ಬಿಜೆಪಿ ಶಾಸಕ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮಾಜಿ ಎಂಎಲ್​ಸಿ ಅರುಣ್ ಶಹಾಪುರ ರೈತರ ದಾಖಲೆಗಳನ್ನ ಪರಿಶೀಲಿಸಿದ್ದಾರೆ. ಬಳಿಕ ಡಿಸಿಯೊಂದಿಗೆ ಚರ್ಚೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:24 am, Wed, 30 October 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ