AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ಆಸ್ತಿ ವಿವಾದ: ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ

ಕರ್ನಾಟಕದಲ್ಲಿ ವಕ್ಫ್ ಬೋರ್ಡ್ ಭೂಮಿ ವಿವಾದ ಜೋರಾಗಿದ್ದು, ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ನಮೂದಿಸಿದ್ದನ್ನು ತೆರವು ಮಾಡಿದೆ. ಆ ಮೂಲಕ ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ ಸಿಕ್ಕಂತ್ತಾಗಿದೆ. ಇತರೆ ರೈತರ ಪಹಣಿಯಲ್ಲಿಯೂ ಇದೇ ರೀತಿ ವಕ್ಪ್ ಬೋರ್ಡ್ ಎಂಬುದನ್ನು ತೆಗೆಯಲು ಮನವಿ ಮಾಡಿದ್ದಾರೆ.

ವಕ್ಫ್ ಆಸ್ತಿ ವಿವಾದ: ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ
ವಕ್ಫ್ ಆಸ್ತಿ ವಿವಾದ: ವಿಜಯಪುರ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 30, 2024 | 12:02 PM

Share

ವಿಜಯಪುರ, ಅಕ್ಟೋಬರ್​ 30: ಕರ್ನಾಟಕದಲ್ಲಿ ವಕ್ಫ್ (Waqf) ಬೋರ್ಡ್ ಆಸ್ತಿ ವಿವಾದ ಭುಗಿಲೆದ್ದಿದೆ. ಇಂದು ಸಾಕಷ್ಟು ರೈತರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಇದೆಲ್ಲದರ ಮಧ್ಯೆ ಪಹಣಿಯಲ್ಲಿ ನಮೂದಾಗಿದ್ದ ಕರ್ನಾಟಕ ವಕ್ಫ್​​ ಬೋರ್ಡ್​ ಪದವನ್ನು ರಾತ್ರೋ ರಾತ್ರಿ ಕಂದಾಯ‌ ಇಲಾಖೆಯ ಅಧಿಕಾರಿಗಳು ತೆರವು ಮಾಡಿದ್ದಾರೆ. ಆ ಮೂಲಕ ಜಿಲ್ಲೆಯ ರೈತರ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ.

ರೈತರ ಪಹಣಿಯ ಕಾಲಂ ನಂಬರ್ 11ರಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿದ್ದ ಪದವನ್ನು ಕಂದಾಯ ಅಧಿಕಾರಿಗಳು‌ ಬದಲಾವಣೆ ಮಾಡಿದ್ದಾರೆ. ಅಕ್ಟೋಬರ್​ 9ರಂದು ತೆನೆಹಳ್ಳಿ ಗ್ರಾಮದ ರೈತ ಯಮನಪ್ಪ ಕೆಂಗನಾಳ ಅವರ ಜಮೀನಿನ ಪಹಣಿಯಲ್ಲಿ ನೋಟೀಸ್ ನೀಡದೇ ಪಹಣಿಯ ಕಾಲಂ ನಂಬರ್ 11ರಲ್ಲಿ ಕರ್ನಾಟಕ ವಕ್ಫ್ ಬೋರ್ಡ್ ಎಂದು ನಮೂದಿಸಿದ್ದರು. ಇದೀಗ ಯಮನಪ್ಪ ಕೆಂಗನಾಳ ಜಮೀನಿನಲ್ಲಿದ್ದ ಕರ್ನಾಟಕ ವಕ್ಫ್ ಬೋರ್ಡ್ ಎಂಬ ಪದವನ್ನು ಅಧಿಕಾರಿಗಳು ಕೈಬಿಟ್ಟಿದ್ದಾರೆ. ಹೀಗಾಗಿ ರೈತರಲ್ಲಿ ಸಂತಸ ಮೂಡಿದೆ.

ಇದನ್ನೂ ಓದಿ: ವಕ್ಫ್​ ಆಸ್ತಿ ವಿವಾದ: ರೈತರಿಗೆ ನೀಡಿದ ನೋಟಿಸ್​ ಸಮರ್ಥಿಸಿಕೊಂಡ ಸಚಿವ ಜಮೀರ್

ಇಂಡಿ ತಾಲ್ಲೂಕಿನ 41 ರೈತರ ಜಮೀನಿಗಳ ನೋಟಿಸ್ ನೀಡದೇ ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ತಹಶೀಲ್ದಾರ್ ನಮೂದಿಸಿದ್ದಾರೆ. ಇತರೆ ರೈತರ ಪಹಣಿಯಲ್ಲಿಯೂ ಇದೇ ರೀತಿ ವಕ್ಪ್ ಬೋರ್ಡ್ ಎಂಬುದನ್ನು ತೆಗೆಯಲು ಮನವಿ ಮಾಡಿದ್ದಾರೆ.

ಇನ್ನು ನಿನ್ನೆ ಸಾಯಂಕಾಲದಿಂದಲೇ ಡಿಸಿ ಕಚೇರಿ ಆವರಣದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ. ಓರ್ವ ಎಸ್​ಪಿ, ಇಬ್ಬರು ಅಡಿಷನಲ್ ಎಸ್​ಪಿ, ಇಬ್ಬರು ಡಿವೈಎಸ್ಪಿ, ನಾಲ್ವರು ಪೊಲೀಸ್ ಇನ್ಸ್‌ಪೆಕ್ಟರ್, ಆರು ಜನ ಸಬ್‌ಇನ್ಸ್‌ಪೆಕ್ಟರ್‌ ಎಚ್ಪಿಸಿ ಹಾಗೂ 50 ಪಿಸಿ ಸಿಬ್ಬಂದಿ ಮತ್ತು ಎರಡು ಡಿಆರ್​ ತುಕಡಿಗಳನ್ನು ಬದ್ಧತೆಗಾಗಿ ನಿಯೋಜನೆ ಮಾಡಲಾಗಿದೆ.

ಬಿಜೆಪಿ ಸತ್ಯಶೋಧನ ತಂಡ ಭೇಟಿ: ಪರಿಶೀಲನೆ 

ಬಿಜೆಪಿ ಸಂಸದ ಗೋವಿಂದ ಕಾರಜೋಳ ನೇತೃತ್ವದ ನಿಯೋಗ ನಿನ್ನೆ ವಿಜಯಪುರಕ್ಕೆ ಭೇಟಿ ಕೊಟ್ಟಿದೆ. ಸಿಂದಗಿ ವಿರಕ್ತ ಮಠದಲ್ಲಿ ರೈತರ ಅಹವಾಲು ಸ್ವೀಕರಿಸಿದೆ. ಬಿಜೆಪಿ ಶಾಸಕ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮಾಜಿ ಎಂಎಲ್​ಸಿ ಅರುಣ್ ಶಹಾಪುರ ರೈತರ ದಾಖಲೆಗಳನ್ನ ಪರಿಶೀಲಿಸಿದ್ದಾರೆ. ಬಳಿಕ ಡಿಸಿಯೊಂದಿಗೆ ಚರ್ಚೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:24 am, Wed, 30 October 24

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್