AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ. 29ರಂದು ಅಖಂಡ ಕರ್ನಾಟಕ ಬಂದ್​​, ಸಭೆಯಲ್ಲಿ ತೀರ್ಮಾನ: ಸಹಕಾರ ನೀಡಬೇಕೆಂದ ವಾಟಾಳ್ ನಾಗರಾಜ್

Karnataka Bandh: ಕಾವೇರಿ ನದಿ ನೀರಿನ ವಿಚಾರವಾಗಿ ನಾಳೆ(ಸೆಪ್ಟೆಂಬರ್ 26) ಬೆಂಗಳೂರು ಬಂದ್​ಗೆ ತೀರ್ಮಾನಿಸಲಾಗಿದೆ. ಮತ್ತೊಂದೆಡೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ವಾಟಳ್ ನಾಗರಾಜ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸೆ. 29ರಂದು ಅಖಂಡ ಕರ್ನಾಟಕ ಬಂದ್​​, ಸಭೆಯಲ್ಲಿ ತೀರ್ಮಾನ: ಸಹಕಾರ ನೀಡಬೇಕೆಂದ ವಾಟಾಳ್ ನಾಗರಾಜ್
ಕರ್ನಾಟಕ ಬಂದ್​
TV9 Web
| Edited By: |

Updated on:Sep 25, 2023 | 1:35 PM

Share

ಬೆಂಗಳೂರು, (ಸೆಪ್ಟೆಂಬರ್ 25): ರಾಜ್ಯದ ಎಲ್ಲ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಇದೇ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ ಕೊಡಲಾಗಿದೆ. ಇಂದು(ಸೆಪ್ಟೆಂಬರ್ 25) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಶುಕ್ರವಾರ ಕರ್ನಾಟಕ ಬಂದ್​ಗೆ ತೀರ್ಮಾನಿಸಲಾಗಿದೆ. ಈ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದು, ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಸೆ.29ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದ್ದು, ಎಲ್ಲರು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.

ಕಾವೇರಿ ನದಿ ನೀರು ಹಂಚಿಕೆ ವಿವಾದ, ಮಹದಾಯಿ ಯೋಜನೆ, ಕೃಷ್ಣಾನದಿ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳ ವಿಚಾರವಾಗಿ ಸೆ.29ರ ಕರ್ನಾಟಕ ಬಂದ್​ಗೆ ಎಲ್ಲರೂ ಸಹಕಾರ ನೀಡಬೇಕು. ಅಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜನೆ ಮಾಡಲಾಗುತ್ತದೆ. ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ವರೆಗೂ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ ಎಂದು ವಿವರಿಸಿದರು.

ಇದನ್ನೂ ಓದಿ:  ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ನರೇಂದ್ರ ಮೋದಿಗೆ ದೇವೇಗೌಡ ಪತ್ರ

ಸದ್ಯಕ್ಕೆ ಕರ್ನಾಟಕ ಬಂದ್​ಗೆ ಓಲಾ ಊಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಬೆಂಬಲವನ್ನು ಘೋಷಿಸಿದ್ದಾರೆ. ಇನ್ನು ಇದಕ್ಕೆ ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್ ಬದಲಾಗಿ ಕರ್ನಾಟಕ ಬಂದ್​ಗೆ ಬೆಂಬಲ ನೀಡಿವೆ.

ಇನ್ನುಳಿದಂತೆ ಯಾವೆಲ್ಲ ಸಂಘ-ಸಂಸ್ಥೆಗಳು ಕರ್ನಾಟಕ ಬಂದ್​ಗೆ ಬೆಂಬಲ ಘೋಷಿಸುತ್ತವೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 1:27 pm, Mon, 25 September 23

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ