AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ. 29ರಂದು ಅಖಂಡ ಕರ್ನಾಟಕ ಬಂದ್​​, ಸಭೆಯಲ್ಲಿ ತೀರ್ಮಾನ: ಸಹಕಾರ ನೀಡಬೇಕೆಂದ ವಾಟಾಳ್ ನಾಗರಾಜ್

Karnataka Bandh: ಕಾವೇರಿ ನದಿ ನೀರಿನ ವಿಚಾರವಾಗಿ ನಾಳೆ(ಸೆಪ್ಟೆಂಬರ್ 26) ಬೆಂಗಳೂರು ಬಂದ್​ಗೆ ತೀರ್ಮಾನಿಸಲಾಗಿದೆ. ಮತ್ತೊಂದೆಡೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ವಾಟಳ್ ನಾಗರಾಜ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸೆ. 29ರಂದು ಅಖಂಡ ಕರ್ನಾಟಕ ಬಂದ್​​, ಸಭೆಯಲ್ಲಿ ತೀರ್ಮಾನ: ಸಹಕಾರ ನೀಡಬೇಕೆಂದ ವಾಟಾಳ್ ನಾಗರಾಜ್
ಕರ್ನಾಟಕ ಬಂದ್​
TV9 Web
| Edited By: |

Updated on:Sep 25, 2023 | 1:35 PM

Share

ಬೆಂಗಳೂರು, (ಸೆಪ್ಟೆಂಬರ್ 25): ರಾಜ್ಯದ ಎಲ್ಲ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಇದೇ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ ಕೊಡಲಾಗಿದೆ. ಇಂದು(ಸೆಪ್ಟೆಂಬರ್ 25) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಶುಕ್ರವಾರ ಕರ್ನಾಟಕ ಬಂದ್​ಗೆ ತೀರ್ಮಾನಿಸಲಾಗಿದೆ. ಈ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದು, ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಸೆ.29ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದ್ದು, ಎಲ್ಲರು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.

ಕಾವೇರಿ ನದಿ ನೀರು ಹಂಚಿಕೆ ವಿವಾದ, ಮಹದಾಯಿ ಯೋಜನೆ, ಕೃಷ್ಣಾನದಿ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳ ವಿಚಾರವಾಗಿ ಸೆ.29ರ ಕರ್ನಾಟಕ ಬಂದ್​ಗೆ ಎಲ್ಲರೂ ಸಹಕಾರ ನೀಡಬೇಕು. ಅಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜನೆ ಮಾಡಲಾಗುತ್ತದೆ. ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ವರೆಗೂ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ ಎಂದು ವಿವರಿಸಿದರು.

ಇದನ್ನೂ ಓದಿ:  ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ನರೇಂದ್ರ ಮೋದಿಗೆ ದೇವೇಗೌಡ ಪತ್ರ

ಸದ್ಯಕ್ಕೆ ಕರ್ನಾಟಕ ಬಂದ್​ಗೆ ಓಲಾ ಊಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಬೆಂಬಲವನ್ನು ಘೋಷಿಸಿದ್ದಾರೆ. ಇನ್ನು ಇದಕ್ಕೆ ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್ ಬದಲಾಗಿ ಕರ್ನಾಟಕ ಬಂದ್​ಗೆ ಬೆಂಬಲ ನೀಡಿವೆ.

ಇನ್ನುಳಿದಂತೆ ಯಾವೆಲ್ಲ ಸಂಘ-ಸಂಸ್ಥೆಗಳು ಕರ್ನಾಟಕ ಬಂದ್​ಗೆ ಬೆಂಬಲ ಘೋಷಿಸುತ್ತವೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 1:27 pm, Mon, 25 September 23

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು