Karnataka Weather: ಕರ್ನಾಟಕದಲ್ಲಿ ಬಿಸಿಲು, ಚಳಿಯ ಕಣ್ಣಾ ಮುಚ್ಚಾಲೆ, ಎಲ್ಲೆಲ್ಲಿ ತಾಪಮಾನ ಎಷ್ಟಿದೆ?
ಕರ್ನಾಟಕದಾದ್ಯಂತ ಬಿಸಿಲು ಚಳಿಯ ಕಣ್ಣಾಮುಚ್ಚಾಲೆ ಮುಂದುವರೆದಿದೆ. ಒಂದಷ್ಟು ಜಿಲ್ಲೆಗಳಲ್ಲಿ ಬಿಸಿಲು ಝಳ ಹೆಚ್ಚಾಗಿದ್ದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಇನ್ನೂ ಚಳಿ ಮುಮದುವರೆದಿದೆ. ಕಲಬುರಗಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಸ್ವಲ್ಪ ಪ್ರಮಾಣದ ಚಳಿ ಮುಂದುವರೆದಿದೆ. ಬೆಳಗಿನ ಜಾವ ಚಳಿ ಇದ್ದರೂ ಬಿಸಿಲ ಝಳವೂ ತೀವ್ರವಾಗಿದೆ. ಮೈಸೂರು ಹಾಗೂ ಚಾಮರಾಜನಗರದಲ್ಲಿ 12.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದಾದ್ಯಂತ ಬಿಸಿಲು ಚಳಿಯ ಕಣ್ಣಾಮುಚ್ಚಾಲೆ ಮುಂದುವರೆದಿದೆ. ಒಂದಷ್ಟು ಜಿಲ್ಲೆಗಳಲ್ಲಿ ಬಿಸಿಲು ಝಳ ಹೆಚ್ಚಾಗಿದ್ದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಇನ್ನೂ ಚಳಿ ಮುಮದುವರೆದಿದೆ. ಕಲಬುರಗಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಸ್ವಲ್ಪ ಪ್ರಮಾಣದ ಚಳಿ ಮುಂದುವರೆದಿದೆ. ಬೆಳಗಿನ ಜಾವ ಚಳಿ ಇದ್ದರೂ ಬಿಸಿಲ ಝಳವೂ ತೀವ್ರವಾಗಿದೆ. ಮೈಸೂರು ಹಾಗೂ ಚಾಮರಾಜನಗರದಲ್ಲಿ 12.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಉಷ್ಣಾಂಶ ಸ್ವಲ್ಪ ಹೆಚ್ಚಿದೆ.
ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಉಷ್ಣಾಂಶದಲ್ಲಿ ಹೆಚ್ಚಿನ ಏರಿಕೆ ಕಂಡುಬಂದಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಎಷ್ಟು ಗರಿಷ್ಠ, ಕನಿಷ್ಠ ಉಷ್ಣಾಂಶವಿದೆ ಎಂಬುದನ್ನು ತಿಳಿಯೋಣ. ಕನಿಷ್ಠ ತಾಪಮಾನವು ಕರಾವಳಿಯಲ್ಲಿ 19-21 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಉತ್ತರ ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಧಾರವಾಡ, ಗದಗ, ಹಾವೇರಿಯಲ್ಲಿ 15-17 ಡಿಗ್ರಿ ಸೆಲ್ಸಿಯಸ್, ಬೀದರ್, ಕಲಬುರಗಿ, ಕೊಪ್ಪಳದಲ್ಲಿ 18-21 ಡಿಗ್ರಿ ಸೆಲ್ಸಿಯಸ್ ಇದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಾಂತ್ಯದಲ್ಲಿ ಹೆಚ್ಚಲಿದೆ ಬಿಸಿಲ ಝಳ
ದಕ್ಷಿಣ ಒಳನಾಡಿನ ಆಗುಂಬೆ, ಚಾಮರಾಜನಗರ, ಚಿಂತಾಮಣಿ, ಮಡಿಕೇರಿ ಮತ್ತು ಮೈಸೂರಿನಲ್ಲಿ 11-14 ಡಿಗ್ರಿ ಸೆಲ್ಸಿಯಸ್, ಬೆಂಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ 15-17 ಡಿಗ್ರಿ ಸೆಲ್ಸಿಯಸ್ ಇದೆ.
ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ವಿಜಯಪುರದ ಕನಿಷ್ಠ ತಾಪಮಾನದಲ್ಲಿ -2.5 ಡಿಗ್ರಿ ಸೆಲ್ಸಿಯಸ್ನಷ್ಟು ಕುಸಿತ ಕಂಡುಬಂದಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ. ಕನಿಷ್ಠ ತಾಪಮಾನವು ಕರಾವಳಿಯ ಪಣಂಬೂರಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಉತ್ತರ ಒಳನಾಡಿನ ಕಲಬುರಗಿಯಲ್ಲಿ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಿಂತಾಮಣಿ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಕೂಡ ಕಡಿಮೆಯಾಗಿದೆ.
ಚಿಕ್ಕಮಗಳೂರಿನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ತಾಪಮಾನವು ಕರಾವಳಿ ಹಾಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಕಡೆಗಳಲ್ಲಿ 33-36 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಕಳೆದ 24 ಗಂಟೆಗಳಲ್ಲಿ ಆಗುಂಬೆಯಲ್ಲಿ ಗರಿಷ್ಠ ತಾಪಮಾನ 4.5 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಉಳಿದ ಕಡೆಗಳಲ್ಲಿ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಕರಾವಳಿಯ ಹೊನ್ನಾವರ, ಕಾರವಾರದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಗದಗ ಮತ್ತು ಕಲಬುರಗಿಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿದೆ. ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ ಮತ್ತು ಕೊಪ್ಪಳದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿದೆ. ದಕ್ಷಿಣ ಒಳನಾಡಿನ ಹಾಸನದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:26 am, Fri, 14 February 25