
ಬೆಂಗಳೂರು, ಆಗಸ್ಟ್ 7: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 7) ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ (Weather Forecast), ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವೆಡೆ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಧಾರವಾಡ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಕಡೆ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೊಡಗು, ಹಾಸನ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲೂ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ಇದೆ.
ಕರ್ನಾಟಕದಲ್ಲಿ ಮುಂಗಾರು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಕರ್ನಾಟಕದ ಬಹುತೇಕ ಕಡೆ ಹಾಗೂ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 9 ಸೆಂ.ಮೀ. ಮಳೆ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಧಾರಿಸಿದ ವಾಯು ಗುಣಮಟ್ಟ; ಮೈಸೂರಿನಲ್ಲೂ ಏಕ್ಯೂಐ ಉತ್ತಮ
ಆಗಸ್ಟ್ 8ರಂದು ಕೂಡ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:18 am, Fri, 7 August 26