Karnataka Weather Forecast: ಮಳೆ ಕೊರತೆ, ಕರ್ನಾಟಕದ ಕೆಲವೆಡೆ ವಾಡಿಕೆಗಿಂತ 3-5 ಡಿಗ್ರಿ ಹೆಚ್ಚಿರಲಿದೆ ಗರಿಷ್ಠ ತಾಪಮಾನ

ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 17: ರಾಜ್ಯದಲ್ಲಿ ಇನ್ನೂ ವ್ಯಾಪಕ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಜುಲೈ 17 ಹಾಗೂ 18ರಂದು ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿ ಬೀಸುವ ಜೊತೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka Weather Forecast: ಮಳೆ ಕೊರತೆ, ಕರ್ನಾಟಕದ ಕೆಲವೆಡೆ ವಾಡಿಕೆಗಿಂತ 3-5 ಡಿಗ್ರಿ ಹೆಚ್ಚಿರಲಿದೆ ಗರಿಷ್ಠ ತಾಪಮಾನ
ಸಾಂದರ್ಭಿಕ ಚಿತ್ರ
Image Credit source: tv9

Updated on: Jul 17, 2026 | 7:02 AM

ಮುಖ್ಯಾಂಶಗಳು

  • ಕರಾವಳಿಯಲ್ಲಿ ಹಲವು ಕಡೆ ಸಾಧಾರಣ ಮಳೆ
  • ಒಳನಾಡಿನಲ್ಲಿ 30-40 ಕಿ.ಮೀ. ಗಾಳಿ ಸಾಧ್ಯತೆ
  • ಮಳೆ ಕೊರತೆಯಿಂದ ಗರಿಷ್ಠ ತಾಪಮಾನದಲ್ಲಿ ಹೆಚ್ಚಳ

ಬೆಂಗಳೂರು, ಜುಲೈ 17: ಕರ್ನಾಟಕದಲ್ಲಿ ಮುಂಗಾರು (Monsoon Rain) ದುರ್ಬಲವಾಗಿರುವ ನಡುವೆಯೇ, ತಾಪಮಾನ ಏರಿಕೆಯಾಗುತ್ತಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಶಿಯಸ್ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ತಿಳಿಸಿದೆ. ಇಂದು (ಜುಲೈ 17) ಮತ್ತು 18ರಂದು ಕರಾವಳಿ ಕರ್ನಾಟಕ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ ಕಡಿಮೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸೀಮಿತವಾಗಿರಲಿದೆ. ಜುಲೈ 17ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮುಖ್ಯವಾಗಿ 30-40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಜುಲೈ 18ರಂದು ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಗಾಳಿ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲೂ ಬರಲ್ಲ ಮಳೆ

ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯ ನಿರೀಕ್ಷೆ ಇಲ್ಲ. ಜುಲೈ 17ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ದಾಖಲೆ ಬರೆದ ಉಷ್ಣಾಂಶ: 112 ವರ್ಷಗಳ ಬಳಿಕ ಜುಲೈನಲ್ಲಿ ಅತ್ಯಧಿಕ ತಾಪಮಾನ ದಾಖಲು

ಜುಲೈ 18ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us