AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂಗಾರು ಮತ್ತಷ್ಟು ದುರ್ಬಲ, 13 ಜಿಲ್ಲೆಗಳ ಕೆಲವೆಡೆ ಹಗುರ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ. ಚಾಮರಾಜನಗರದಲ್ಲಿ 2 ಸೆಂ.ಮೀ ಮಳೆಯಾಗಿದ್ದು, ಸೆಪ್ಟೆಂಬರ್ 13ರಂದು ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ. ಏತನ್ಮಧ್ಯೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂಗಾರು ಮತ್ತಷ್ಟು ದುರ್ಬಲ, 13 ಜಿಲ್ಲೆಗಳ ಕೆಲವೆಡೆ ಹಗುರ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Sep 12, 2026 | 6:32 AM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ದುರ್ಬಲ
  • ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆ
  • ದಕ್ಷಿಣ ಒಳನಾಡಿನಲ್ಲಿ ಗುಡುಗು, ಗಾಳಿ ಸಾಧ್ಯತೆ

ಬೆಂಗಳೂರು, ಸೆಪ್ಟೆಂಬರ್ 12: ಕರ್ನಾಟಕದಲ್ಲಿ ಮುಂಗಾರು ಮಳೆ ದುರ್ಬಲವಾಗಿದ್ದು, ರಾಜ್ಯದ ಕೆಲವೆಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲೂ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಚದುರಿದ ಮಳೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮಳೆ

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ನಿರೀಕ್ಷೆ ಸದ್ಯಕ್ಕೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 13ರಂದು ಇದೇ ಜಿಲ್ಲೆಗಳಲ್ಲಿ ಹಗುರ ಮಳೆಯ ಜೊತೆಗೆ ಗುಡುಗು ಸಹಿತ ಮಳೆ ಹಾಗೂ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯನ್ನೂ ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ದುರ್ಬಲ

ಶುಕ್ರವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಒಂದೆರಡು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಹಲವು ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಈ ನಡುವೆ, ವಾಯವ್ಯ-ಪಶ್ಚಿಮ ಮಧ್ಯ ಬಂಗಾಳಕೊಲ್ಲಿ ಹಾಗೂ ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಒಡಿಶಾ–ಉತ್ತರ ಆಂಧ್ರಪ್ರದೇಶ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯು ಸಮುದ್ರಮಟ್ಟದಿಂದ ಸುಮಾರು 7.6 ಕಿಲೋಮೀಟರ್ ಎತ್ತರದವರೆಗೆ ವಿಸ್ತರಿಸಿದೆ. ಇದು ನೈಋತ್ಯ ದಿಕ್ಕಿನತ್ತ ಚಲಿಸಲಿದ್ದು, ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಸ್ಪಷ್ಟವಾಗಿ, ಉತ್ತರ ಕರಾವಳಿ ಆಂಧ್ರಪ್ರದೇಶ–ದಕ್ಷಿಣ ಒಡಿಶಾ ಭಾಗದ ಮೂಲಕ ಪಶ್ಚಿಮ-ವಾಯವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

LIVE TV

ಮುಂದಿನ ದಿನಗಳಲ್ಲಿ ಈ ವಾಯುಭಾರ ಕುಸಿತದ ಬೆಳವಣಿಗೆಯ ಆಧಾರದ ಮೇಲೆ ಕರ್ನಾಟಕದ ಕೆಲವು ಭಾಗಗಳಲ್ಲಿನ ಮಳೆ ಪ್ರಮಾಣದಲ್ಲಿ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us