AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಇಂದಿನಿಂದ ಬಾಗಲಕೋಟೆ, ಬೆಳಗಾವಿ ಸೇರಿದಂತೆ ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ

ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ, ಮಲೆನಾಡು ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಹಲವೆಡೆ ಒಂದೆರಡು ಮಳೆ ಬಂದು ಹೋಗಿದ್ದರ ಪರಿಣಾಮ ಸೆಕೆ ವಿಪರೀತವಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Karnataka Weather: ಇಂದಿನಿಂದ ಬಾಗಲಕೋಟೆ, ಬೆಳಗಾವಿ ಸೇರಿದಂತೆ ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ
ಮಳೆ
ನಯನಾ ರಾಜೀವ್
|

Updated on: Apr 29, 2024 | 7:44 AM

Share

ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬಾಗಲಕೋಟೆ ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯಾದ್ಯಂತ ಒಣಹವೆ ಇತ್ತು, ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಉಷ್ಣ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ 3 ದಿನ ಮಳೆ, ಯೆಲ್ಲೋ ಅಲರ್ಟ್

ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ಪಣಂಬೂರಿನಲ್ಲಿ 34.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 36.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 41.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿತ್ರದುರ್ಗದಲ್ಲಿ39.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,24.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ