AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂಗಾರು ದುರ್ಬಲ, ಕರಾವಳಿ ಕರ್ನಾಟಕದಲ್ಲಿ ಸಾಧಾರಣೆ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮುನ್ಸೂಚನೆ ಸೆಪ್ಟೆಂಬರ್ 7: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿರುವುದು ಕಂಡುಬಂದಿದೆ. ಆದಾಗ್ಯೂ ಸೆಪ್ಟೆಂಬರ್ 7 ಮತ್ತು 8ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಗಾಳಿಯ ಮುನ್ಸೂಚನೆ ಇದೆ. ಎಲ್ಲೆಲ್ಲಿ ಮಳೆಯಾಗಲಿದೆ? ಯಾವ ಜಿಲ್ಲೆಯಲ್ಲಿ ಗಾಳಿಯ ಅಬ್ಬರ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂಗಾರು ದುರ್ಬಲ, ಕರಾವಳಿ ಕರ್ನಾಟಕದಲ್ಲಿ ಸಾಧಾರಣೆ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Sep 07, 2026 | 6:29 AM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಮುಂಗಾರು ದುರ್ಬಲ
  • ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
  • ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಮುಂದುವರಿಕೆ

ಬೆಂಗಳೂರು, ಸೆಪ್ಟೆಂಬರ್ 7: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದೆ. ಆದಾಗ್ಯೂ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ 4 ಸೆಂ.ಮೀ ಮಳೆಯಾಗಿದ್ದು, ಯಾದಗಿರಿ ಜಿಲ್ಲೆಯ ಕಕ್ಕೇರಿ 3 ಸೆಂ.ಮೀ ಮಳೆ ಪಡೆದಿದೆ. ಹುಣಸಗಿ, ಗದಗ ಹಾಗೂ ತೀರ್ಥಹಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆ ದಾಖಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಸೆಪ್ಟೆಂಬರ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಇದೇ ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸಬಹುದು.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.

ಸೆಪ್ಟೆಂಬರ್ 8ರಂದು ಎಲ್ಲೆಲ್ಲಿ ಮಳೆ ಮುನ್ಸೂಚನೆ?

ಸೆಪ್ಟೆಂಬರ್ 8ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಭಾನುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಮಳೆಯಾಗಿರುವುದಕ್ಕೆ ಸಂಬಂಧಿಸಿದ ಮಾಹಿತಿ ಇಲ್ಲಿದೆ;

  • ಚನ್ನರಾಯಪಟ್ಟಣ, ಹಾಸನ: 4 ಸೆಂ.ಮೀ
  • ಕಕ್ಕೇರಿ, ಯಾದಗಿರಿ: 3 ಸೆಂ.ಮೀ
  • ಹುಣಸಗಿ, ಯಾದಗಿರಿ: 1 ಸೆಂ.ಮೀ
  • ಗದಗ ಪಿಬಿಒ ಅಬ್ಸರ್ವೇಟರಿ: 1 ಸೆಂ.ಮೀ
  • ತೀರ್ಥಹಳ್ಳಿ, ಶಿವಮೊಗ್ಗ: 1 ಸೆಂ.ಮೀ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us