AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ರಾಜ್ಯದೆಲ್ಲೆಡೆ ಹೆಚ್ಚಿದ ವರುಣಾರ್ಭಟ; ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​

Karnataka Weather: ರಾಜ್ಯದಲ್ಲಿಂದು ವರುಣನ ಆರ್ಭಟ ಹೆಚ್ಚಿರಲಿದ್ದು, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲೂ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ನೆರೆಯ ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಭಾರಿ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಅಪ್ಪಳಿಸುತ್ತಿದೆ. ಮೀನುಗಾರಿಕೆಗೂ ನಿಷೇಧ ಹೇರಿದ ಸ್ಥಳೀಯ ಅಧಿಕಾರಿಗಳು, ಎಚ್ಚರವಹಿಸುವಂತೆ ಕರಾವಳಿ ಪ್ರದೇಶದ ಜನರಿಗೆ ಸೂಚನೆ ನೀಡಿದ್ದಾರೆ.

Weather Today: ರಾಜ್ಯದೆಲ್ಲೆಡೆ ಹೆಚ್ಚಿದ ವರುಣಾರ್ಭಟ; ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​
ರಾಜ್ಯದೆಲ್ಲೆಡೆ ಹೆಚ್ಚಿದ ವರುಣಾರ್ಭಟ, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​
ಭಾವನಾ ಹೆಗಡೆ
|

Updated on: Oct 27, 2025 | 7:46 AM

Share

ಬೆಂಗಳೂರು, ಅಕ್ಟೋಬರ್​ 27: ಕರ್ನಾಟದಲ್ಲಿ ವರುಣಾರ್ಭಟ (Weather Forecast) ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ಉತ್ತರ ಒಳನಾಡು ಪ್ರದೇಶಗಳಾದ ಹಾವೇರಿ, ಧಾರವಾಡ, 30-40 ಕೀಮೀ ಗಾಳಿಯ ವೇಗದೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ 30-40 ಕೀಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಿರಲಿದೆ.

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಸಹ ಗುಡುಗು ಸಹಿತ ಭಾರಿ ಮಳೆಯಾಗಿದ್​​ದು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ , ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ಬಳ್ಳಾರಿ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿಯೂ ಮಳೆ

ಬೆಂಗಳೂರಿನಲ್ಲಿ ಇಂದು ಶೇ. 55 ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣವಿರಲಿದೆ. ನಗರದ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೆರೆ ರಾಜ್ಯಗಳಲ್ಲಿ ಹೆಚ್ಚಿದ ವರುಣಾರ್ಭಟ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಮೊಂಟಾ ಸೈಕ್ಲೋನ್ ಅಂತಾ ನಾಮಕರಣ ಮಾಡಿದ್ದು, ಆಂಧ್ರದ ಮಚಲಿಪಟ್ಟಣಂ, ಕಳಿಂಗಪಟ್ಟಣ ನಡುವಿನ ಕಾಕಿನಾಡ ಸಮುದ್ರ ತೀರದಲ್ಲಿ 90ನಿಂದ 110 ಕಿಲೋ ಮೀಟರ್ ವೇಗದಲ್ಲಿ ಕರಾವಳಿ ಅಪ್ಪಳಿಸಲಿದೆ. ಭಾರೀ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಆರ್ಭಟಿಸಲಿದೆ.

ಒಡಿಶಾ, ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ NDRF, SDRF, ರಕ್ಷಣಾ ಸಿಬ್ಬಂದಿ ನಿಯೋಜಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ತೆರಳಿರೋ ಬೋಟ್​​​​​ಗಳ ಸಮೇತ ತೀರಕ್ಕೆ ವಾಪಸ್ಸಾಗುವಂತೆ ಸೂಚಿಸಲಾಗುತ್ತಿದೆ.

ಲಕ್ಷದ್ವೀಪದ ಸಮೀಪ ವಾಯುಭಾರ ಕುಸಿತದಿಂದ ಆತಂಕ

ಲಕ್ಷದ್ವೀಪದ ಸಮೀಪ ವಾಯುಭಾರ ಕುಸಿತ ವಾಗಿದ್ದು, ಸಮುದ್ರದಲ್ಲಿ ಬಿರುಗಾಳಿ ಬೀಸುತ್ತಿದೆ. ಗಾಳಿಯ ಒತ್ತಡ ಹೆಚ್ಚಿರುವುದರಿಂದ ತಮಿಳುನಾಡು ಬೋಟ್​ಗಳು ಸೇರಿದಂತೆ ನಾಡ ದೋಣಿಗಳು ವಾಪಸ್ ಆಗುತ್ತಿವೆ. ಉಡುಪಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್​ಗಳು 2-3 ದಿನಗಳ ಹಿಂದೆಯೇ ಸುರಕ್ಷಿತವಾಗಿ ಮಲ್ಪೆ ಬಂದರು ಪ್ರವೇಶಿಸಿವೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಿಲಾಗಿದ್ದು, ಚಂಡಮಾರುತದ ಭೀತಿ ಹೆಚ್ಚಿರುವುದರಿಂದ ಮೀನುಗಾರರಿಗೆ ಆರ್ಥಿಕ ಹೊಡೆತ ಬೀಳಲಿದೆ ಎಂದು ಮೀನುಗಾರರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ