
ಬೆಂಗಳೂರು, ಏ.16: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ, ಯಾವೆಲ್ಲ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಳೆ ಇದೆ ಎಂಬುದನ್ನು ಇಲ್ಲಿ ನೋಡುವ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಡುವ ಬಿಸಲು ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ನಗರದಲ್ಲಿ ಮೋಡಕವಿದ ವಾತಾವರಣ ಕಂಡುಬಂದರೂ, ಸೆಖೆಯ ಪ್ರಮಾಣ ಹೆಚ್ಚಿರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಹಗುರ ಮಳೆಯ ಮುನ್ಸೂಚನೆ ಇದೆ.
ಇದನ್ನೂ ಓದಿ: ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಆಕರ್ಷಣೆ ಹೆಚ್ಚಾಗಲಿದ್ದು, ಎಲ್ಲ ಕಡೆ ಹೊಳೆಯುವರು
| ಜಿಲ್ಲೆ | ಗರಿಷ್ಠ ತಾಪಮಾನ | ಕನಿಷ್ಠ ತಾಪಮಾನ |
| ಬೆಂಗಳೂರು | 36°C | 22°C |
| ಕಲಬುರಗಿ | 42°C | 26°C |
| ಮಂಗಳೂರು | 34°C | 25°C |
| ಶಿವಮೊಗ್ಗ | 37°C | 23°C |
| ಹುಬ್ಬಳ್ಳಿ-ಧಾರವಾಡ | 39°C | 24°C |
ಲಬುರಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನವು 40°C ದಾಟುವ ಸಾಧ್ಯತೆಯಿದ್ದು, ಜನರಿಗೆ ಬಿಸಿಲಿನಿಂದ ಜಾಗರೂಕರಾಗಿರಲು ಸೂಚಿಸಲಾಗಿದೆ.ಮಂಗಳೂರು, ಉಡುಪಿ ಮತ್ತು ಕಾರವಾರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದ ಜೊತೆಗೆ ತೇವಾಂಶ ಭರಿತ ಹವಾಮಾನ ಇರಲಿದ್ದು, ಉಷ್ಣಾಂಶದ ಅನುಭವ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ