AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೆ ಬಿಡದ ಬಿಸಿಲ ಬೇಗೆ: ಉತ್ತರ ಕರ್ನಾಟಕದಲ್ಲಿ ಕೆಂಡದಂತಹ ಬಿಸಿಲು! ಮಲೆನಾಡಿನಲ್ಲಿ ಹೇಗಿದೆ ತಾಪಮಾನ?

ಏಪ್ರಿಲ್ 2 ರಂದು ಕರ್ನಾಟಕದಲ್ಲಿ ತೀವ್ರ ಬಿಸಿಲು ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಒಣ ಹವಾಮಾನ (35-37°C) ಇರಲಿದೆ. ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ 42°C ತಲುಪುವ ಸಾಧ್ಯತೆಯಿದ್ದು, ಮಧ್ಯಾಹ್ನ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ತೇವಾಂಶ ಹೆಚ್ಚಿದ್ದು, ಮಲೆನಾಡಿನಲ್ಲಿ ತುಂತುರು ಮಳೆಯ ಮುನ್ಸೂಚನೆಯಿದೆ. ಮಧ್ಯಾಹ್ನ ಮನೆಯಿಂದ ಹೊರಬರದಂತೆ ಸಲಹೆ ನೀಡಲಾಗಿದೆ.

ಬೆಂಗಳೂರಿಗರಿಗೆ ಬಿಡದ ಬಿಸಿಲ ಬೇಗೆ: ಉತ್ತರ ಕರ್ನಾಟಕದಲ್ಲಿ ಕೆಂಡದಂತಹ ಬಿಸಿಲು! ಮಲೆನಾಡಿನಲ್ಲಿ ಹೇಗಿದೆ ತಾಪಮಾನ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Apr 02, 2026 | 6:18 AM

Share

ಬೆಂಗಳೂರು, ಏ.2: ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆಯ ವೇಳೆಗೆ ಆಕಾಶ ಭಾಗಶಃ ಮೋಡದಿಂದ ಕೂಡಿದ್ದರೂ ಮಳೆಯ ಮುನ್ಸೂಚನೆ ತೀರಾ ಕಡಿಮೆ ಇದೆ. ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲ ಧಗೆ ವಿಪರೀತವಾಗಿರಲಿದೆ. ಇಲ್ಲಿನ ಕೆಲವು ಭಾಗಗಳಲ್ಲಿ ಉಷ್ಣಾಂಶವು 41°C ದಾಟುವ ಸಾಧ್ಯತೆಯಿದ್ದು, ಮಧ್ಯಾಹ್ನದ ವೇಳೆ ಬಿಸಿಗಾಳಿ (Heat Wave) ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಸೆಖೆ ಮತ್ತು ಹಬೆ (Humidity) ಹೆಚ್ಚಿರಲಿದೆ. ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು (42°C ಸಂಭವನೀಯ) ಗರಿಷ್ಠ ಉಷ್ಣಾಂಶ ಇರಲಿದೆ ಎಂದು ಹೇಳಲಾಗಿದೆ. ಮಲೆನಾಡು ಭಾಗದಲ್ಲಿ (20°C – 22°C) ಕನಿಷ್ಠ ಉಷ್ಣಾಂಶ ಇರಲಿದೆ. ಇನ್ನು ಇಲಾಖೆ ಹೇಳಿರುವಂತೆ ಉತ್ತರ ಕರ್ನಾಟಕದ ಜನರಿಗೆ ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಮನೆಯಿಂದ ಹೊರಬರದಂತೆ ಸೂಚನೆ ನೀಡಲಾಗಿದೆ.

ಇಲ್ಲಿದೆ ನೋಡಿ: 1,2,3,4,5,6,7 ಈ ದಿನದಂದು ಮಧ್ಯಾಹ್ನದ ನಂತರ ಬರಲಿದೆ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದು?

ಕರಾವಳಿಯಲ್ಲಿ ಬಿಸಿಲಿಗಿಂತಲೂ ಸೆಖೆ ಮತ್ತು ಹಬೆ ಜನರನ್ನ ಹೆಚ್ಚು ಕಾಡಲಿದೆ. ಗರಿಷ್ಠ 33°C – 35°C, ಆದರೆ ಅನುಭವಕ್ಕೆ ಬರುವ ತಾಪಮಾನ (Feels like) 38°C ದಾಟಬಹುದು. ಕಡಲತೀರದ ಭಾಗಗಳಲ್ಲಿ ಸಂಜೆ ವೇಳೆ ತಂಗಾಳಿ ಬೀಸುವ ಸಾಧ್ಯತೆ ಇದೆ. ಮೈಸೂರು ಭಾಗದಲ್ಲಿ ಒಣ ಹವಾಮಾನವಿದ್ದರೂ, ಸಂಜೆಯ ವೇಳೆಗೆ ತುಸು ತಂಪು ವಾತಾವರಣವಿರಲಿದೆ. ದಿನವಿಡೀ ಬಿಸಿಲು, ಸಂಜೆ ಭಾಗಶಃ ಮೋಡ ಕವಿದ ವಾತಾವರಣ. ಮಳೆಯ ಸಾಧ್ಯತೆ ತೀರಾ ಕಡಿಮೆ ಇದೆ. ಉತ್ತರ ಕರ್ನಾಟಕ (ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ) ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ಇಲ್ಲಿ ದಾಖಲಾಗುತ್ತಿದೆ. ಇಲ್ಲಿ ತಪಮಾನ ಗರಿಷ್ಠ 39°C ನಿಂದ 42°C ವರೆಗೆ ಏರಿಕೆಯಾಗುವ ಸಂಭವವಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ನೇರ ಬಿಸಿಲಿಗೆ ಮೈಯೊಡ್ಡದಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ