AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Forecast: ಉತ್ತರ ಮತ್ತು ದಕ್ಷಿಣ ಒಳನಾಡಿನ ಜನರೇ ಎಚ್ಚರ!: ಮುಂದಿನ 5 ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರು

ಭಾರತೀಯ ಹವಾಮಾನ ಇಲಾಖೆ (IMD) ಮೇ 25 ರಿಂದ 29 ರವರೆಗೆ ರಾಜ್ಯದಲ್ಲಿ ಭಾರೀ ಮಳೆ, ಗುಡುಗು, ಸಿಡಿಲು ಹಾಗೂ ತೀವ್ರ ಬಿರುಗಾಳಿ ಬೀಸುವ ಸಾಧ್ಯತೆ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಗಾಳಿ ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಇಡೀ ವಾರ ವ್ಯಾಪಕ ಮಳೆಯಾಗಲಿದ್ದು, ತಾಪಮಾನ ಗಣನೀಯವಾಗಿ ಇಳಿಯಲಿದೆ. ಹಳೆಯ ಕಟ್ಟಡ ಹಾಗೂ ಮರಗಳ ಬಳಿ ನಿಲ್ಲದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

Weather Forecast: ಉತ್ತರ ಮತ್ತು ದಕ್ಷಿಣ ಒಳನಾಡಿನ ಜನರೇ ಎಚ್ಚರ!: ಮುಂದಿನ 5 ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 25, 2026 | 5:41 PM

Share

ಬೆಂಗಳೂರು, ಮೇ.25: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಮೇ 25 ರಿಂದ ಮೇ 29ರ ವರೆಗಿನ ಪ್ರಸ್ತುತ ಪರಿಸ್ಥಿತಿಯ ಕಂಪ್ಲೀಟ್ ವಿವರ ಇಲ್ಲಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 25, 26 ಮತ್ತು 29 ರಂದು ಉತ್ತರ ಒಳನಾಡಿನ (NIK) ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗಲಿದೆ. ಆದರೆ, ಮೇ 27 ಮತ್ತು 28 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅತ್ಯಂತ ಭೀಕರ ಪರಿಸ್ಥಿತಿ ಇರಲಿದ್ದು, ಗಂಟೆಗೆ ಭರೋಬ್ಬರಿ 50 ರಿಂದ 60 ಕಿ.ಮೀ ವೇಗದಲ್ಲಿ ಭೀಕರ ಬಿರುಗಾಳಿ (Gusty Wind) ಬೀಸುವ ಸಾಧ್ಯತೆ ಇದೆ. ಸಾರ್ವಜನಿಕರು ಹಳೆಯ ಕಟ್ಟಡ ಹಾಗೂ ಮರಗಳ ಬಳಿ ನಿಲ್ಲದಂತೆ ಸೂಚಿಸಲಾಗಿದೆ.

ಇತ್ತ ದಕ್ಷಿಣ ಒಳನಾಡಿನ (SIK) ಜಿಲ್ಲೆಗಳಲ್ಲಿಯೂ ಸಹ ಮೇ 25 ರಿಂದ ಮೇ 29 ರವರೆಗೆ ಕಠಿಣ ಹವಾಮಾನ ಇರಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಇದರೊಂದಿಗೆ ಕರಾವಳಿ ಕರ್ನಾಟಕದ (Coastal Karnataka) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 26 ರಿಂದ ಮೇ 29 ರವರೆಗೆ ಸತತ ನಾಲ್ಕು ದಿನಗಳ ಕಾಲ ಭಾರಿ ಗುಡುಗು ಮತ್ತು ಸಿಡಿಲಿನ ಆರ್ಭಟ ಇರಲಿದೆ ಎಂದು ಇಲಾಖೆ ಎಚ್ಚರಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶುಕ್ರವಾರದವರೆಗೆ ಗುಡುಗು ಸಹಿತ ಭಾರೀ ಮಳೆ

ಬೆಂಗಳೂರಿನಲ್ಲಿ ಮೇ 29 ರವರೆಗೆ ಗುಡುಗು ಸಹಿತ ಮಳೆ:

ತೀವ್ರ ಉಷ್ಣಾಂಶ ಹಾಗೂ ಸುಡುವ ಬಿಸಿಲಿನಿಂದ ಕಂಗಾಲಾಗಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ಅತ್ಯಂತ ತಂಪಾದ ಮುನ್ಸೂಚನೆಯೊಂದನ್ನು ನೀಡಿದೆ. ನಗರದಲ್ಲಿ ಮುಂದಿನ ಇಡೀ ವಾರ ಅಂದರೆ ಮೇ 29 ರವರೆಗೆ ವ್ಯಾಪಕ ಮಳೆಯಾಗುವ (Widespread Rains) ಬಲವಾದ ಸಾಧ್ಯತೆ ಇದ್ದು, ವರುಣನ ಆಗಮನದಿಂದ ತಾಪಮಾನ ಗಣನೀಯವಾಗಿ ಕುಸಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಐಎಂಡಿ ಭಾನುವಾರ ಹೊರಡಿಸಿರುವ ಇತ್ತೀಚಿನ ವರದಿಯ ಪ್ರಕಾರ, ಮೇ ಕೊನೆಯ ವಾರದಾದ್ಯಂತ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಹವಾಮಾನ ಕಂಪ್ಲೀಟ್ ಬದಲಾಗಲಿದೆ. ನಗರದಾದ್ಯಂತ ನಿರಂತರವಾಗಿ ದಟ್ಟ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಈ ಮಳೆಯ ಮಾರುತಗಳು ಇಡೀ ನಗರದ ವಾತಾವರಣವನ್ನು ಕೂಲ್ ಮಾಡಲಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Mon, 25 May 26

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ