Karnataka Weather: ನವೆಂಬರ್ 4ರಿಂದ 7ರವರೆಗೆ ದಕ್ಷಿಣ ಒಳನಾಡಿನ ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದಾದ್ಯಂತ ಹಲವೆಡೆ ಚಳಿ ಶುರುವಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇದ್ದು, ಗರಿಷ್ಠ ಉಷ್ಣಾಂಶವು ಕೊಂಚ ಏರಿಕೆಯಾಗಿದೆ. ಹಾಗೆಯೇ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ನವೆಂಬರ್ 4 ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ನವೆಂಬರ್ 4ರಿಂದ 7ರವರೆಗೆ ದಕ್ಷಿಣ ಒಳನಾಡಿನ ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆImage Credit source: Popular Mechanics
Follow us
|

Updated on:Nov 02, 2023 | 7:28 AM

ಕರ್ನಾಟಕದಾದ್ಯಂತ ಹಲವೆಡೆ ಚಳಿ ಶುರುವಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇದ್ದು, ಗರಿಷ್ಠ ಉಷ್ಣಾಂಶವು ಕೊಂಚ ಏರಿಕೆಯಾಗಿದೆ. ಹಾಗೆಯೇ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ನವೆಂಬರ್ 4 ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಗೋಕರ್ಣ, ಸಿದ್ದಾಪುರ, ಕುಮಟಾ, ಗೇರುಸೊಪ್ಪ, ಯಲ್ಲಾಪುರ, ಹಳಿಯಾಳ, ಸುಳ್ಯ, ಧಾರವಾಡ, ಲಿಂಗನಮಕ್ಕಿ, ಹುಬ್ಬಳ್ಳಿ, ಲೋಂಡಾ, ಕಮ್ಮರಡಿ, ಕೊಪ್ಪ, ತ್ಯಾಗರ್ತಿಯಲ್ಲಿ ಮಳೆಯಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು, ಗಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ವಿಜಯಪುರದಲ್ಲಿ 16.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಜುಕವಿದ ವಾತಾವರಣವಿದೆ, ಮುಂದಿನ ಒಂದೆರಡು ದಿನ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ, ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

Published On - 7:28 am, Thu, 2 November 23

ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!