AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ 2 ದಿನ ಮಳೆ

ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Karnataka Weather: ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ 2 ದಿನ ಮಳೆ
ಮಳೆImage Credit source: The Weather Channel
ನಯನಾ ರಾಜೀವ್
|

Updated on: Apr 18, 2023 | 7:30 AM

Share

ಮುಖ್ಯಾಂಶಗಳು

  • ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಕಾಲ ಮಳೆ
  • ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ
  • ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ

ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್​, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 40.7 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಅಲ್ಲಲ್ಲಿ ಮಳೆ, ಅಲ್ಲಲ್ಲಿ ಬಿಸಿಲು. ಇದು ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಆಗುತ್ತಿರುವ ಗಮನಾರ್ಹ ಬದಲಾವಣೆ. ಇದೀಗ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ. ಈ ಭಾಗಗಳಲ್ಲಿ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ