Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಶುಕ್ರವಾರದಿಂದ 3 ದಿನ ಭಾರೀ ಮಳೆ; ಆರೆಂಜ್ ಅಲರ್ಟ್​ ಘೋಷಣೆ

Monsoon 2021: ಇಂದು ಮುಂಜಾನೆಯಿಂದಲೇ ಮಲೆನಾಡು, ಕರಾವಳಿಯಲ್ಲಿ ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಮೂರು ದಿನ ಭಾರೀ ಮಳೆಯಾಗುವ ಅಂದಾಜಿದೆ.

Karnataka Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಶುಕ್ರವಾರದಿಂದ 3 ದಿನ ಭಾರೀ ಮಳೆ; ಆರೆಂಜ್ ಅಲರ್ಟ್​ ಘೋಷಣೆ
ಉಡುಪಿಯಲ್ಲಿ ಐದು ದಿನ ಆರೆಂಜ್ ಅಲರ್ಟ್ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 10, 2021 | 9:11 AM

ಮಂಗಳೂರು: ಕರ್ನಾಟಕದಲ್ಲಿ ನಾಳೆಯಿಂದ ಈ ಸಾಲಿನ ಮುಂಗಾರು ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಾಳೆಯಿಂದ ಕರಾವಳಿ ಭಾಗಗಳಲ್ಲಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮುಂಜಾನೆಯಿಂದಲೇ ಮಲೆನಾಡು, ಕರಾವಳಿಯಲ್ಲಿ ಮಳೆ ಶುರುವಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದಿನಿಂದಲೇ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಜೂನ್ 13ರವರೆಗೂ ಮಳೆ ತೀವ್ರವಾಗಿರಲಿದೆ ಎಂದು ಅಂದಾಜಿಸಲಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 3 ದಿನ ಗುಡುಗು ಸಿಡಿಲು ಸಹಿತ ಮಳೆ ಬೀಳಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಯಿದೆ ಎಂದೂ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್​ಡಿಆರ್​ಎಫ್​ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ, ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆ ಬಿಡುಗಡೆಗೊಳಿಸಿದ ವರದಿಯನುಸಾರ ಎರಡನೆಯ ದೀರ್ಘಾವಧಿ ಅಂದಾಜಿನಲ್ಲಿ ಈ ಬಾರಿ ಮುಂಗಾರು ಪ್ರಮಾಣ ಶೇ. 101ರಷ್ಟಿರಲಿದೆ. ಇದು ಎರಡು ವರ್ಷಗಳ ದೀರ್ಘಾವಧಿ ಸರಾಸರಿ (LPA) ಮಳೆ ಪ್ರಮಾಣದ ಆಧಾರದಲ್ಲಿದೆ. LPA ಅಂದ್ರೆ ದೀರ್ಘಾವಧಿ ಮಳೆ ಸರಾಸರಿ 88 ಸೆಂಟಿ ಮೀಟರ್ ಪ್ರಮಾಣದಲ್ಲಿರುತ್ತದೆ. ಇದನ್ನು 1961ರ ಮತ್ತು 2010ರ ನಡುವೆ ಜೂನ್​ ಮತ್ತು ಸೆಪ್ಟೆಂಬರ್ ತಿಂಗಳಲ್ಲಾದ ​ಮಳೆಯನ್ನಾಧರಿಸಿ ಲೆಕ್ಕ ಹಾಕಲಾಗಿದೆ.

2020 ಮತ್ತು 2019 ಮುಂಗಾರು ಸಾಲಿನಲ್ಲಿ LPA ಮಳೆ ಸರಾಸರಿ ಅನುಕ್ರಮವಾಗಿ 110 % ಮತ್ತು 109 % ಪ್ರಮಾಣದಲ್ಲಿತ್ತು. 1996, 1997 ಮತ್ತು 1998 ಮುಂಗಾರು ಸಾಲಿನಲ್ಲಿ 103.4 %, 102.2 % ಮತ್ತು 104 % ಪ್ರಮಾಣದ ಮಳೆಯಾಗಿತ್ತು.

ಜೂನ್​ ನಿಂದ ಸೆಪ್ಟೆಂಬರ್​ ವರೆಗಿನ ನಾಲ್ಕು ತಿಂಗಳ ಮುಂಗಾರು ಸಾಲಿನಲ್ಲಿ ಭಾರತದಲ್ಲಿ ಶೇ. 70ರಷ್ಟು ಮಳೆಯಾಗುತ್ತದೆ. ಇದು ಅಕ್ಕಿ, ಸೋಯಾಬೀನ್, ಹತ್ತಿ ಬೆಳೆಗೆ ನಿರ್ಣಾಯಕವಾಗಿರುತ್ತದೆ. ಕಳೆದ ಎರಡು ವರ್ಷಗಳಿಂದ ಇದು ಉತ್ತಮವಾಗಿದೆ. ಕೊವಿಡ್​ ಸೋಂಕು ಕಾಲದಲ್ಲೂ ಕಳೆದ ವರ್ಷ ಉತ್ತಮ ಮಳೆಯಾಗಿ ರೈತಾಪಿ ರ್ಗಕ್ಕೆ ಆಶಾದಾಯಕವಾಗಿತ್ತು. ಈ ವರ್ಷವೂ ಇದೇ ನಿರೀಕ್ಷೆಯಲ್ಲಿದೆ ರೈತಾಪಿ ವರ್ಗ.

(Karnataka Weather Monsoon 2021 orange alert announced in coastal areas)

Karnataka Weather: ಹವಾಮಾನ ವರದಿ – ಇಂದು ರಾಜ್ಯದ ಕೆಲವೆಡೆ ಆರೆಂಜ್​ ಅಲರ್ಟ್​, ಯಾವ ಯಾವ ಭಾಗಗಳಲ್ಲಿ ಮಳೆ ಸಾಧ್ಯತೆ?

Published On - 9:10 am, Thu, 10 June 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ