AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ 44.3 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲು

ರಾಯಚೂರು ಜಿಲ್ಲೆಯಲ್ಲಿ 18 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 16 ಸ್ಥಳಗಳು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 5 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 3 ಸ್ಥಳಗಳು, ಬೀದರ್ ಜಿಲ್ಲೆಯಲ್ಲಿ 2 ಸ್ಥಳಗಳು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ತಲಾ 1 ಸ್ಥಳಗಳಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್​ ಗಿಂತ ಹೆಚ್ಚು ದಾಖಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ 44.3 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲು
ತಾಪಮಾನ
ವಿವೇಕ ಬಿರಾದಾರ
|

Updated on: Mar 31, 2024 | 6:51 AM

Share

ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಶನಿವಾರ (ಮಾರ್ಚ್​ 30) ರಂದು ಅತ್ಯಧಿಕ 44.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ಬೀದರ್, ಬಾಗಲಕೋಟೆ, ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 42 ಡಿಗ್ರಿ ಸೆಲ್ಸಿಯಸ್​​ನಿಂದ 44.3 ಡಿಗ್ರಿ ಸೆಲ್ಸಿಯಸ್​ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಯಚೂರು ಜಿಲ್ಲೆಯಲ್ಲಿ 18 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 16 ಸ್ಥಳಗಳು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 5 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 3 ಸ್ಥಳಗಳು, ಬೀದರ್ ಜಿಲ್ಲೆಯಲ್ಲಿ 2 ಸ್ಥಳಗಳು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ತಲಾ 1 ಸ್ಥಳಗಳಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್​ ಗಿಂತ ಹೆಚ್ಚು ದಾಖಲಾಗಿದೆ.

ಮುಂದಿನ 5 ದಿನಗಳ ತಾಪಮಾನದ ಮುನ್ಸೂಚನೆ:

ಶಾಖದ ಅಲೆಯ ಎಚ್ಚರಿಕೆ: ಮುಂದಿನ ಮೂರು ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆ ಹೆಚ್ಚಾಗಿ ಬೀಸುವ ಸಾಧ್ಯತೆಯಿದೆ.

ಉತ್ತರ ಒಳನಾಡು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್​ವರೆಗೆ ಹೆಚ್ಚಾಗುವ ಸಾಧ್ಯತೆಯಿದೆ. ಮಾರ್ಚ್ 30ರಿಂದ ಏಪ್ರಿಲ್​ 1ರ ನಡುವೆ ಮಧ್ಯಪ್ರದೇಶ, ವಿದರ್ಭ ಮತ್ತು ಉತ್ತರ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಹೆಚ್ಚಾಗಲಿದೆ.

ಹೀಟ್ ಸ್ಟ್ರೋಕ್​ಗೆ ಒಳಗಾದರೆ ಏನು ಮಾಡಬೇಕು?

ಹೀಟ್ ಸ್ಟ್ರೋಕ್​ಗೆ ಒಳಗಾದ ವ್ಯಕ್ತಿಯನ್ನು ನೆರಳಿನ ಪ್ರದೇಶಕ್ಕೆ ಅಥವಾ ಒಳಾಂಗಣಕ್ಕೆ ಕರೆದುಕೊಂಡು ಹೋಗಿ. ನಂತರ ತುರ್ತು ವೈದ್ಯಕೀಯ ಸಹಾಯಕ್ಕಾಗಿ ಕರೆ ಮಾಡಿ. ವೈದ್ಯಕೀಯ ಸಹಾಯ ಬರುವವರೆಗೂ ಈ ಕ್ರಮಗಳನ್ನು ಪಾಲಿಸಿ..

  • ವ್ಯಕ್ತಿಯನ್ನು ಮೇಲ್ಮುಖವಾಗಿ ಮಲಗಿಸಿ.
  • ಪ್ರಜ್ಞೆ ಇದ್ದಲ್ಲಿ ಅವರಿಗೆ ತಂಪಾದ ನೀರನ್ನು ಕುಡಿಸಿರಿ
  • ಹೆಚ್ಚುವರಿ ಬಟ್ಟೆಗಳನ್ನು ತೆಗೆದುಹಾಕುವುದರಿಂದ ದೇಹದ ಉಷ್ಣಾಂಶ ಕಡಿಮೆಯಾಗುತ್ತದೆ.
  • ತಂಪಾದ ನೀರನ್ನು ಸಿಂಪಡಿಸಿ
  • ಬಗಲು, ಮಣಿಕಟ್ಟುಗಳು, ಕೈ-ಕಾಲುಗಳು ಮತ್ತು ತೊಡೆಸಂದುಗಳಿಗೆ ಒದ್ದೆಯಾದ ಬಟ್ಟೆ / ಟವೆಲ್ / ಸ್ಪಂಜುಗಳು / ಐಸ್ ಪ್ಯಾಕ್ ಗಳಿಂದ ತಂಪಾಗಿಸಿ.
  • ಫ್ಯಾನ್ ಗಾಳಿಯ ಕೆಳಗೆ ಮಲಗಿಸಿ.
  • ನೆನಪಿಡಿ, ಸಮಯೋಚಿತ ಚಿಕಿತ್ಸೆಯು ಮುಖ್ಯವಾಗಿದೆ! ಈ ಬೇಸಿಗೆಯ ಶಾಖದಿಂದ ತಪ್ಪಿಸಿಕೊಳ್ಳಲು ತಂಪಾಗಿರಿ ಮತ್ತು ಹೆಚ್ಚು ನೀರು ಸೇವಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ