AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ 44.3 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲು

ರಾಯಚೂರು ಜಿಲ್ಲೆಯಲ್ಲಿ 18 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 16 ಸ್ಥಳಗಳು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 5 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 3 ಸ್ಥಳಗಳು, ಬೀದರ್ ಜಿಲ್ಲೆಯಲ್ಲಿ 2 ಸ್ಥಳಗಳು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ತಲಾ 1 ಸ್ಥಳಗಳಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್​ ಗಿಂತ ಹೆಚ್ಚು ದಾಖಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ 44.3 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲು
ತಾಪಮಾನ
ವಿವೇಕ ಬಿರಾದಾರ
|

Updated on: Mar 31, 2024 | 6:51 AM

Share

ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಶನಿವಾರ (ಮಾರ್ಚ್​ 30) ರಂದು ಅತ್ಯಧಿಕ 44.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ಬೀದರ್, ಬಾಗಲಕೋಟೆ, ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 42 ಡಿಗ್ರಿ ಸೆಲ್ಸಿಯಸ್​​ನಿಂದ 44.3 ಡಿಗ್ರಿ ಸೆಲ್ಸಿಯಸ್​ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಯಚೂರು ಜಿಲ್ಲೆಯಲ್ಲಿ 18 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 16 ಸ್ಥಳಗಳು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 5 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 3 ಸ್ಥಳಗಳು, ಬೀದರ್ ಜಿಲ್ಲೆಯಲ್ಲಿ 2 ಸ್ಥಳಗಳು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ತಲಾ 1 ಸ್ಥಳಗಳಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್​ ಗಿಂತ ಹೆಚ್ಚು ದಾಖಲಾಗಿದೆ.

ಮುಂದಿನ 5 ದಿನಗಳ ತಾಪಮಾನದ ಮುನ್ಸೂಚನೆ:

ಶಾಖದ ಅಲೆಯ ಎಚ್ಚರಿಕೆ: ಮುಂದಿನ ಮೂರು ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆ ಹೆಚ್ಚಾಗಿ ಬೀಸುವ ಸಾಧ್ಯತೆಯಿದೆ.

ಉತ್ತರ ಒಳನಾಡು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್​ವರೆಗೆ ಹೆಚ್ಚಾಗುವ ಸಾಧ್ಯತೆಯಿದೆ. ಮಾರ್ಚ್ 30ರಿಂದ ಏಪ್ರಿಲ್​ 1ರ ನಡುವೆ ಮಧ್ಯಪ್ರದೇಶ, ವಿದರ್ಭ ಮತ್ತು ಉತ್ತರ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಹೆಚ್ಚಾಗಲಿದೆ.

ಹೀಟ್ ಸ್ಟ್ರೋಕ್​ಗೆ ಒಳಗಾದರೆ ಏನು ಮಾಡಬೇಕು?

ಹೀಟ್ ಸ್ಟ್ರೋಕ್​ಗೆ ಒಳಗಾದ ವ್ಯಕ್ತಿಯನ್ನು ನೆರಳಿನ ಪ್ರದೇಶಕ್ಕೆ ಅಥವಾ ಒಳಾಂಗಣಕ್ಕೆ ಕರೆದುಕೊಂಡು ಹೋಗಿ. ನಂತರ ತುರ್ತು ವೈದ್ಯಕೀಯ ಸಹಾಯಕ್ಕಾಗಿ ಕರೆ ಮಾಡಿ. ವೈದ್ಯಕೀಯ ಸಹಾಯ ಬರುವವರೆಗೂ ಈ ಕ್ರಮಗಳನ್ನು ಪಾಲಿಸಿ..

  • ವ್ಯಕ್ತಿಯನ್ನು ಮೇಲ್ಮುಖವಾಗಿ ಮಲಗಿಸಿ.
  • ಪ್ರಜ್ಞೆ ಇದ್ದಲ್ಲಿ ಅವರಿಗೆ ತಂಪಾದ ನೀರನ್ನು ಕುಡಿಸಿರಿ
  • ಹೆಚ್ಚುವರಿ ಬಟ್ಟೆಗಳನ್ನು ತೆಗೆದುಹಾಕುವುದರಿಂದ ದೇಹದ ಉಷ್ಣಾಂಶ ಕಡಿಮೆಯಾಗುತ್ತದೆ.
  • ತಂಪಾದ ನೀರನ್ನು ಸಿಂಪಡಿಸಿ
  • ಬಗಲು, ಮಣಿಕಟ್ಟುಗಳು, ಕೈ-ಕಾಲುಗಳು ಮತ್ತು ತೊಡೆಸಂದುಗಳಿಗೆ ಒದ್ದೆಯಾದ ಬಟ್ಟೆ / ಟವೆಲ್ / ಸ್ಪಂಜುಗಳು / ಐಸ್ ಪ್ಯಾಕ್ ಗಳಿಂದ ತಂಪಾಗಿಸಿ.
  • ಫ್ಯಾನ್ ಗಾಳಿಯ ಕೆಳಗೆ ಮಲಗಿಸಿ.
  • ನೆನಪಿಡಿ, ಸಮಯೋಚಿತ ಚಿಕಿತ್ಸೆಯು ಮುಖ್ಯವಾಗಿದೆ! ಈ ಬೇಸಿಗೆಯ ಶಾಖದಿಂದ ತಪ್ಪಿಸಿಕೊಳ್ಳಲು ತಂಪಾಗಿರಿ ಮತ್ತು ಹೆಚ್ಚು ನೀರು ಸೇವಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?