AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕ ಹವಾಮಾನ – ರಾಜ್ಯಾದ್ಯಂತ ಮೈಕೊರೆವ ಚಳಿ, ಅಲ್ಲಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮೈಕೊರೆವ ಚಳಿ ಆರಂಭವಾಗಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 17 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಹಾಗೆಯೇ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕ ಹವಾಮಾನ - ರಾಜ್ಯಾದ್ಯಂತ ಮೈಕೊರೆವ ಚಳಿ, ಅಲ್ಲಲ್ಲಿ ಮಳೆ ಸಾಧ್ಯತೆ
ಚಳಿImage Credit source: Indian Express
Follow us
ನಯನಾ ರಾಜೀವ್
| Updated By: Digi Tech Desk

Updated on:Dec 14, 2023 | 12:00 PM

ಕರ್ನಾಟಕದಾದ್ಯಂತ ಮೈಕೊರೆವ ಚಳಿ ಆರಂಭವಾಗಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 17 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಹಾಗೆಯೇ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ಸುಳ್ಯದಲ್ಲಿ ಬುಧವಾರ ಮಳೆಯಾಗಿದೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ವಿಜಯಪುರದಲ್ಲಿ 12.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಬರುವ ಸಾಧ್ಯತೆ ಕಡಿಮೆ ಇದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ರಾಯಚೂರು ಭಾಗದಲ್ಲಿ 17 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರದಲ್ಲಿ 12, ಚಿಕ್ಕಮಗಳೂರಿನಲ್ಲಿ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ರಾಜ್ಯಾದ್ಯಂತ ಚಳಿ, ದಕ್ಷಿಣ ಒಳನಾಡು, ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ. ದಿನೇ ದಿನೇ ವಾತಾವರಣದಲ್ಲಿನ ತಂಪು ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಇರಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:28 am, Thu, 14 December 23