Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ನವೆಂಬರ್ 25ರವರೆಗೂ ಮಳೆಯಾಗಲಿದೆ.

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಮಳೆ
Follow us
|

Updated on: Nov 19, 2023 | 7:59 AM

ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ನವೆಂಬರ್ 25ರವರೆಗೂ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡದಲ್ಲೂ ಮಳೆಯಾಗುವ ನಿರೀಕ್ಷೆ ಇದೆ, ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಪುತ್ತೂರಿನಲ್ಲಿ ಮಳೆಯಾಗಿದೆ.

ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

ಮಿಧಿಲಿ ಚಂಡಮಾರುತವು ದುರ್ಬಲಗೊಂಡಿದೆ, ತ್ರಿಪುರಾ ಹಾಗೂ ಮಿಜೋರಾಂನಲ್ಲಿ ಶನಿವಾರ ಮಳೆಯಾಗಿರಲಿಲ್ಲ, ಆದರೆ ಒಂದು ದಿನದ ಹಿಂದೆ ಭಾರಿ ಮಳೆಯಾಗಿತ್ತು. ಚಂಡಮಾರುತವು ಅಗರ್ತಲಾದಿಂದ ಪೂರ್ವಕ್ಕೆ 50 ಕಿ.ಮೀ ದೂರದಲ್ಲಿದೆ. ಚಂಡಮಾರುತವು ಬಾಂಗ್ಲಾದೇಶದ ಕರಾವಳಿಯನ್ನು ದಾಟಿದ ಬಳಿಕ ದುರ್ಬಲವಾಗಿತ್ತು.

ಮಿಜೋರಾಂನಲ್ಲಿ ಆಕಾಶ ಶುಭ್ರವಾಗಿತ್ತು, ತ್ರಿಪುರದಲ್ಲಿ ಮೋಡಕವಿದ ವಾತಾವರಣವಿತ್ತು. ತಮಿಳುನಾಡಿನಲ್ಲಿ ಭಾರಿ ಮಳೆಯಾಗಿದೆ, ನವೆಂಬರ್ 19ರಂದು ಪೂರ್ವ ಮೇಘಾಲಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೇ ನವೆಂಬರ್ 20ರವರೆಗೆ ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೇ ಕೇರಳದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ