AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕೊಡಗಿನಲ್ಲಿ ತಂಪೆರೆದ ಮಳೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ, ಕೊಡಗಿನಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಮಾರ್ಚ್ 20ರ ನಂತರ ಮಡಿಕೇರಿಯ ಹಲವು ಕಡೆಗಳಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗರಿಷ್ಠ ಉಷ್ಣಾಂಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Karnataka Weather: ಕೊಡಗಿನಲ್ಲಿ ತಂಪೆರೆದ ಮಳೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
ಕೊಡಗುImage Credit source: Holidify
ನಯನಾ ರಾಜೀವ್
|

Updated on: Mar 14, 2024 | 7:32 AM

Share

ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೊಡಗಿನ ಹಲವೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಬೆಂಗಳೂರಿನಲ್ಲೂ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬುಧವಾರ ಮಧ್ಯಾಹ್ನ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲುವಿನಲ್ಲಿ ಉತ್ತಮ ಮಳೆಯಾಗಿದೆ. ಅದಾದ ಬಳಿಕ ಕಾಕೋಟು, ಪರಂಬು ಪ್ರದೇಶಗಳಲ್ಲಿ ಕೂಡ ಸಾಧಾರಣ ಮಳೆ ಸುರಿದಿದೆ.

ಮಾರ್ಚ್ 20ರ ನಂತರ ಮಡಿಕೇರಿಯ ಹಲವು ಕಡೆಗಳಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಬಾಗಲಕೋಟೆಯಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಚಾಮರಾಜನಗರದಲ್ಲಿ 18.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: India Weather: ದೆಹಲಿ, ಪಂಜಾಬ್​ ಸೇರಿದಂತೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ

ಹೊನ್ನಾವರದಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ