Karnataka Weather: ಕಲಬುರಗಿ, ಬೀದರ ಜಿಲ್ಲೆಯಲ್ಲಿ ಇಂದು ಭಾರಿ ಮಳೆ; ಯೆಲ್ಲೋ ಅಲರ್ಟ್​​ ಘೋಷಣೆ

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಉತ್ತರ ಕರ್ನಾಟದ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಕಲಬುರಗಿ ಮತ್ತು ಬೀದರ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.

Karnataka Weather: ಕಲಬುರಗಿ, ಬೀದರ ಜಿಲ್ಲೆಯಲ್ಲಿ ಇಂದು ಭಾರಿ ಮಳೆ; ಯೆಲ್ಲೋ ಅಲರ್ಟ್​​ ಘೋಷಣೆ
ಮಳೆ

Updated on: Jul 21, 2023 | 6:57 AM

ಬೆಂಗಳೂರು: ರಾಜ್ಯಾದ್ಯಂತ ಇನ್ನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ (Karnataka Rain). ಒತ್ತರ ಒಳನಾಡು ಬೆಳಗಾವಿ, ಕಲಬುರಗಿ (Kalaburagi), ಬೀದರ (Bidar) ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯಲ್ಲೊ ಅಲರ್ಟ್ (Orange Alert)​ ಘೋಷಣೆ ಮಾಡಿದೆ. ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲೂ ಕೂಡ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಯಲ್ಲೋ ಅಲರ್ಟ್​​ ಘೋಷಿಸಲಾಗಿದೆ. ಹಾಗೆ ಕರಾವಳಿ ಪ್ರದೇಶದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲೂ ಸಹಿತ ಭಾರಿ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಗಾಳಿ ಘಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಶೇ 23 ರಷ್ಟು ಮಳೆ ಕೊರತೆ; ಹವಾಮಾನ ಇಲಾಖೆ

ದಕ್ಷಿಣ ಒಳನಾಡು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಗಾಳಿಯು ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಬೀಸುತ್ತದೆ.

ಶಿವಮೊಗ್ಗದ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದ ಅತಿ ಹೆಚ್ಚು ಮಳೆಯಾಗಿದ್ದು, ಕ್ರಮವಾಗಿ 113.5 ಮಿಮೀ, 111.5 ಮಿಮೀ ಮತ್ತು 110 ಮಿಮೀ ಮಳೆ ದಾಖಲಾಗಿದೆ ಎಂದು ಕೇಂದ್ರ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ