Karnataka Weather: ಇಂದು ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಒಣಹವೆ? ಇಲ್ಲಿದೆ ಹವಾಮಾನ ವರದಿ
ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 15 ರಿಂದ ಐದು ದಿನಗಳ ಕಾಲ ಮಳೆಯಾಗಲಿದೆ. ಅಲ್ಲದೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮೋಡ ಕವಿದ ವಾತಾವರಣವಿರಲಿದೆ, ಎರಡು ದಿನದ ಬಳಿಕ ಮಳೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ನ.14: ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದ್ದು ಕರ್ನಾಟಕದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ (Karnataka Weather) . ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 15 ರಿಂದ ಐದು ದಿನಗಳ ಕಾಲ ಮಳೆಯಾಗಲಿದೆ. ಅಲ್ಲದೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮೋಡ ಕವಿದ ವಾತಾವರಣವಿರಲಿದೆ, ಎರಡು ದಿನದ ಬಳಿಕ ಮಳೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳು ಭಾಗಶ: ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಇದನ್ನೂ ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ, ನವೆಂಬರ್ 15 ರಿಂದ 5 ದಿನಗಳ ಕಾಲ ಮಳೆ
ವಿಜಯಪುರ ಜಿಲ್ಲೆಯ ನಾಗತಿಬಸಾಪುರ, ನಾಗತಿಬಸಾಪುರ, ಹಾಸನ ಜಿಲ್ಲೆಯ ಜಂಬೂರು, ಚಿಕ್ಕಮಗಳೂರು ಜಿಲ್ಲೆಯ ಮೇಲಿನ ಹುಲುವತ್ತಿ, ಯಲಗತವಳಿ, ಶಾಂತಿಗ್ರಾಮ, ಹಲಸುಲಿಗೆ, ಬೈಲಹಳ್ಳಿ, ಉಡುಪಿ ಜಿಲ್ಲೆಯ ಮೊಲಹಳ್ಳಿ, ತಲ್ಲೂರು, ಗುಜ್ಜಾಡಿ, ವಡ್ಡರ್ಸೆ, ಕಡೆಕರ್, ಕುಚ್ಚೂರು, ತುಳುವಿನಕೊಪ್ಪ, ತ್ರಿಪುರ, ದಾಸರಹಳ್ಳಿ, ಚಿಕ್ಕಂಗಲದಲ್ಲಿ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಅಲ್ಲದೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ