AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆ; ಜೂನ್ 17ರವರೆಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆ

Monsoon 2021 Rain: ಉತ್ತರ ಒಳನಾಡಿನಲ್ಲಿ ಕೂಡ ಸೋಮವಾರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಜೂನ್ 14ರಿಂದ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.

Karnataka Weather: ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆ; ಜೂನ್ 17ರವರೆಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆ
ಮಳೆ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Jun 13, 2021 | 8:27 PM

Share

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಕಳೆದೊಂಡು ದಿನದಿಂದಲೇ ಭಾರೀ ಮಳೆಯಾಗುತ್ತಿದ್ದು, ಜೂನ್ 17ರವರೆಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಮುಂಜಾನೆಯಿಂದಲೂ ಕರಾವಳಿಯ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಮಳೆಯ ಆರ್ಭಟಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಅನೇಕ ಮನೆಗಳೂ ಹಾನಿಗೊಂಡಿವೆ.

ಕರಾವಳಿಯ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ (ಜೂನ್ 13) ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರದಂದು ರೆಡ್ ಅಲರ್ಟ್ ಕೂಡ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಮತ್ತು 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉಳಿದ ದಿನಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

ಉತ್ತರ ಒಳನಾಡಿನಲ್ಲಿ ಕೂಡ ಸೋಮವಾರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಜೂನ್ 14ರಿಂದ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮುಂಗಾರು ಮಳೆ ಆಗುತ್ತಿದೆ. ಹೀಗಾಗಿ, ಕೊಡಗು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನದಿ ತೀರದಲ್ಲಿರುವವರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಗದಗ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಿದೆ. ಗದಗ-ಬೆಟಗೇರಿ ಅವಳಿ ನಗರದಲ್ಲಿ ಮಳೆ ಸುರಿದಿದೆ. ಇದರಿಂದ, ಬಿತ್ತನೆ ಮಾಡಿದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಕೊಪ್ಪಳದಲ್ಲಿ ಜಿಟಿ ಜಿಟಿ ಮಳೆಯಾಗಿದೆ. ನಗರದಾದ್ಯಂತ ಮಳೆ ಸುರಿದಿದ್ದು, ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ವಿಜಯಪುರ ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಕೀರ್ತಿ ನಗರ, ಜಲನಗರ, ಹಾಗೂ ಸ್ಟೇಶನ್ ರಸ್ತೆಯಲ್ಲಿ ಜೋರಾಗಿ ಮಳೆಯಾಗಿದೆ. ಬೆಂಗಳೂರಿನ ಟಿ.ದಾಸರಹಳ್ಳಿ ಸುತ್ತಮುತ್ತಲೂ ಭಾರಿ ಮಳೆಯಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಜಿಲ್ಲೆಯಲ್ಲಿ 24 ಗಂಟೆಯಲ್ಲಿ 84 ಮಿಲಿ ಮೀಟರ್ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ 3 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರಿಗೆ ಉಡುಪಿ ಜಿಲ್ಲಾಡಳಿತದಿಂದ ಮುನ್ಸೂಚನೆ ನೀಡಲಾಗಿದೆ. ಬೈಂದೂರು ತಾಲೂಕಿನಲ್ಲಿ ಅತಿ ಹೆಚ್ಚು 57 ಮಿ.ಮೀ. ಮಳೆಯಾಗಿದ್ದರೆ, ಬ್ರಹ್ಮಾವರ ತಾಲೂಕಿನಲ್ಲಿ 52 ಮಿಲಿ ಮೀಟರ್ ಮಳೆಯಾಗಿದೆ.

ಇದನ್ನೂ ಓದಿ: Viral Video: ಮನೆ ಮುಂದೆ ನಿಲ್ಲಿಸಿದ ಕಾರು ನೋಡನೋಡುತ್ತಿದ್ದಂತೆಯೇ ಮಾಯ! ಮಳೆ ನೀರು ತಂದ ಅವಾಂತರ ನೀವೂ ನೋಡಿ

Monsoon 2021: ಮುಂಬೈನಲ್ಲಿ ಮಹಾ ಮಳೆ; ಮುಂದಿನ ಎರಡು ದಿನ ಆರೆಂಜ್​ ಅಲರ್ಟ್​​, ಪರಿಸ್ಥಿತಿ ಎದುರಿಸಲು ರಕ್ಷಣಾ ತಂಡಗಳು ಸನ್ನದ್ಧ

Published On - 6:00 pm, Sun, 13 June 21

Follow Us
TV9 Web
TV9 Web

TV9 Kannada

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!