AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರ, ಕರ್ನಾಟಕದ ಹವಾಮಾನದಲ್ಲಿ ಬದಲಾವಣೆಯಾಗುತ್ತಾ?

ಕರ್ನಾಟಕದ ಹಲವೆಡೆ ಗರಿಷ್ಠ ಉಷ್ಣಾಂಶ ಹೆಚ್ಚಾಗಿದೆ, ಇನ್ನೂ ಕೆಲವೆಡೆ ತಂಪಾದ ವಾತಾವರಣ ಮುಂದುವರೆದಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗಳ್ಳುತ್ತಿರುವ ಕಾರಣ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ. ಆದರೆ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಣಿಪುರ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

Karnataka Weather: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರ, ಕರ್ನಾಟಕದ ಹವಾಮಾನದಲ್ಲಿ ಬದಲಾವಣೆಯಾಗುತ್ತಾ?
ಹವಾಮಾನImage Credit source: Farmer's Almanac
ನಯನಾ ರಾಜೀವ್
|

Updated on:Feb 18, 2025 | 7:26 AM

Share

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪ್ರಭಾವ 13ಕ್ಕೂ ಅಧಿಕ ರಾಜ್ಯಗಳ ಮೇಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಣಿಪುರ ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಆದರೆ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ.

ಮೈಸೂರು, ವಿಜಯಪುರ, ಚಾಮರಾಜನಗರದಲ್ಲಿ 13.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಗರಿಷ್ಠ ತಾಪಮಾನದಲ್ಲಿ -3.5 ಡಿಗ್ರಿ ಸೆಲ್ಸಿಯಸ್​ನಷ್ಟು ಕುಸಿತ ಕಂಡಿದೆ. ಆಗುಂಬೆಯಲ್ಲಿ -2.7 ಡಿಗ್ರಿ ಸೆಲ್ಸಿಯಸ್​ನಷ್ಟು ಕುಸಿತವಾಗಿದೆ. ಆದರೆ ಬೆಂಗಳೂರು, ಹಾಸನ, ಚಿಂತಾಮಣಿಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿತ್ತು.

ಕನಿಷ್ಠ ತಾಪಮಾನವು ಕರಾವಳಿಯಲ್ಲಿ 21-24 ಡಿಗ್ರಿ ಸೆಲ್ಸಿಯಸ್​, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗದಲ್ಲಿ 14-16 ಡಿಗ್ರಿ ಸೆಲ್ಸಿಯಸ್, ರಾಯಚೂರು, ಕಲಬುರಗಿ, ಹಾವೇರಿಯಲ್ಲಿ 17-19 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮೈಸೂರು, ಮಡಿಕೇರಿಯಲ್ಲಿ 13-15 ಡಿಗ್ರಿ ಸೆಲ್ಸಿಯಸ್, ಆಗುಂಬೆ, ಬೆಂಗಳೂರುನಗರ, ಚಿತ್ರದುರ್ಗ, ಶಿವಮೊಗ್ಗದಲ್ಲಿ 16-19 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ, ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ಗರಿಷ್ಠ ತಾಪಮಾನವು ಕರಾವಳಿಯಲ್ಲಿ 33-37 ಡಿಗ್ರಿ ಸೆಲ್ಸಿಯಸ್, ಬೆಳಗಾವಿಯಲ್ಲಿ 30-34 ಡಿಗ್ರಿ ಸೆಲ್ಸಿಯಸ್, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಕಲಬುರಗಿ, ರಾಯಚೂರಿನಲ್ಲಿ 31-37 ಡಿಗ್ರಿ ಸೆಲ್ಸಿಯಸ್, ಆಗುಂಬೆ, ಮೈಸೂರು, ಬೆಂಗಳೂರು, ಚಿಕ್ಕಮಗಳೂರು, ಮಡಿಕೇರಿ, ಚಿಂತಾಮಣಿಯಲ್ಲಿ 31-33 ಡಿಗ್ರಿ ಸೆಲ್ಸಿಯಸ್​, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ 34-36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ. ಎಚ್​ಎಎಲ್​ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 am, Tue, 18 February 25

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು