AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯಾದ್ಯಂತ ಶೀತಗಾಳಿ ಬೀಸುತ್ತಿದೆ, ಮಂಜು ಮುಸುಕಿದ ವಾತಾವರಣವಿದೆ, ಇದರ ನಡುವೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಇಂದಿನಿಂದ ಜನವರಿ 10ರವರೆಗೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಬುಧವಾರದಿಂದಲೂ ಮೋಡಕವಿದ ವಾತಾವರಣವಿದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಮಳೆ ಸಾಧ್ಯತೆ
ಮಳೆImage Credit source: Popular Mechanics
ನಯನಾ ರಾಜೀವ್
|

Updated on: Jan 04, 2024 | 7:26 AM

Share

ರಾಜ್ಯಾದ್ಯಂತ ಶೀತಗಾಳಿ ಬೀಸುತ್ತಿದೆ, ಮಂಜು ಮುಸುಕಿದ ವಾತಾವರಣವಿದೆ, ಇದರ ನಡುವೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಇಂದಿನಿಂದ ಜನವರಿ 10ರವರೆಗೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಬುಧವಾರದಿಂದಲೂ ಮೋಡಕವಿದ ವಾತಾವರಣವಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡದ ಮಾಣಿಯಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ವಿಜಯಪುರದಲ್ಲಿ 12.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. 27 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಶೀತಗಾಳಿ, 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆ

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮೈಸೂರಿನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಶಿವಮೊಗ್ಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್