Karnataka Weather Today: ಬೆಂಗಳೂರಿನಲ್ಲಿ ಇಂದೂ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ನಾಳೆಯಿಂದ ಆರೆಂಜ್ ಅಲರ್ಟ್ ಘೋಷಣೆ

Karnataka Rain: ಇಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ನಾಳೆಯಿಂದ 2 ದಿನ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಕೂಡ ಮಳೆ ಸುರಿಯುವ ನಿರೀಕ್ಷೆಯಿದೆ.

Karnataka Weather Today: ಬೆಂಗಳೂರಿನಲ್ಲಿ ಇಂದೂ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ನಾಳೆಯಿಂದ ಆರೆಂಜ್ ಅಲರ್ಟ್ ಘೋಷಣೆ
ತುಂತುರು ಮಳೆಗೆ ವಾರಾಂತ್ಯದಲ್ಲಿ ಬೆಂಗಳೂರು ಕೂಲ್ ಕೂಲ್; ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಜಿಟಿ ಜಿಟಿ ಮಳೆ ಕಾಟ!
Follow us
| Updated By: ಸುಷ್ಮಾ ಚಕ್ರೆ

Updated on: Oct 04, 2021 | 7:19 AM

Bangalore Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಲೆನಾಡು, ಕೊಡಗು, ಕರಾವಳಿಯಲ್ಲೂ ಮಳೆ ಹೆಚ್ಚಾಗಿದೆ. ಇಂದು ಕರ್ನಾಟಕದ (Karnataka Rain) ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ನಾಳೆಯಿಂದ 2 ದಿನ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ (IMD) ನೀಡಿದೆ. ಬೆಂಗಳೂರಿನಲ್ಲಿ (Bengaluru Rain) ಇಂದು ಸಂಜೆ ಕೂಡ ಮಳೆ ಸುರಿಯುವ ನಿರೀಕ್ಷೆಯಿದೆ.

ಈಗಾಗಲೇ ಮುಂಗಾರು ಅಂತ್ಯವಾಗಿದ್ದರೂ ಅ. 6ರವರೆಗೂ ಮಳೆ ಮುಂದುವರಿಯಲಿದೆ. ಅ. 5 ಮತ್ತು 6ರಂದು ರಾಜ್ಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗಿನಲ್ಲಿ ಅ. 5 ಮತ್ತು 6ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರ್ಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ನಿನ್ನೆ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗಿದ್ದು, ಬನಶಂಕರಿ, ಬಸವನಗುಡಿ, ಜಯನಗರ, ಜೆಪಿ ನಗರ, ಕೋರಮಂಗಲ, ಹನುಮಂತನಗರ, ಗಿರಿನಗರ, ಎಂಜಿ ರಸ್ತೆ, ಪದ್ಮನಾಭನಗರ, ಉತ್ತರಹಳ್ಳಿ, ಆರ್​ಆರ್​ ನಗರ, ವಿಜಯನಗರ, ಚಾಮರಾಜಪೇಟೆ ಸುತ್ತಮುತ್ತಲೂ ಭಾನುವಾರ ಸಂಜೆಯಿಂದ ಮಧ್ಯರಾತ್ರಿಯವರೆಗೂ ಮಳೆ ಸುರಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ, ರಸ್ತೆಗಳೆಲ್ಲ ಕೆರೆಗಳಂತಾಗಿತ್ತು. ಕೆಲವೆಡೆ ರಾಜಕಾಲುವೆ ಉಕ್ಕಿ ಹರಿದ ಘಟನೆಯೂ ನಡೆಯಿತು. ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹೆಚ್‌ಎಎಲ್ ಬಳಿಯ ರಮೇಶ್ ನಗರದಲ್ಲಿ ಗೋಡೆ ಕುಸಿತವಾಗಿದೆ. ಹೆಚ್‌ಎಎಲ್‌ಗೆ ಸೇರಿದ 12 ಅಡಿ ಎತ್ತರದ ಗೋಡೆ ಕುಸಿತವಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ಶೇ. 8ರಷ್ಟು ಕಡಿಮೆ ಮಳೆಯಾಗಿದೆ. ಇಂದು ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವುದರಿಂದ ಅ. 6ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ 4 ತಿಂಗಳ ಮುಂಗಾರು ಸೆ. 30ಕ್ಕೆ ಅಂತ್ಯವಾಗಿದೆ. ಕರ್ನಾಟಕದಲ್ಲಿ ಈ ವರ್ಷ 852 ಮಿ.ಮೀ. ಮಳೆಯಾಗಬೇಕಿತ್ತು ಆದರೆ, 787 ಮಿ.ಮೀ. ಮಳೆ ದಾಖಲಾಗಿದೆ. ಕಲಬುರ್ಗಿಯಲ್ಲಿ ಭಾರೀ ಮಳೆಯಿಂದ ಅಪಾರ ಬೆಳೆಗಳು ನಾಶವಾಗಿವೆ. ಕರ್ನಾಟಕ, ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಜೊತೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೇರಳದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿಹಾರ, ತ್ರಿಪುರ, ಮಣಿಪುರ, ಮಿಜೋರಾಂ, ಲಕ್ಷದ್ವೀಪ, ಮಧ್ಯಪ್ರದೇಶ, ಜಾರ್ಖಂಡ್, ಗುಜರಾತ್, ಮಹಾರಾಷ್ಟ್ರ, ಒರಿಸ್ಸಾ, ಕೇರಳ, ತಮಿಳುನಾಡು, ಗೋವಾ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಉತ್ತರಾಖಂಡ, ಪಂಜಾಬ್, ಹರಿಯಾಣ, ಛತ್ತೀಸ್​ಗಢ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಕೂಡ ಅ. 6ರವರೆಗೂ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಅ. 6ರವರೆಗೂ ಮಳೆ; ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿಂದು ಹಳದಿ ಅಲರ್ಟ್ ಘೋಷಣೆ

Karnataka Rain: ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ; ಇಂದಿನಿಂದ 3 ದಿನ ಸಾಧಾರಣ ಮಳೆ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು