AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಇಂದಿನಿಂದ 4 ದಿನ ಕರ್ನಾಟಕದಲ್ಲಿ ಮಳೆ; ನಾಳೆ ಒಡಿಶಾಗೆ ಅಪ್ಪಳಿಸಲಿದೆ ಜವಾದ್ ಚಂಡಮಾರುತ

Karnataka Rain: ನಾಳೆ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಆರ್ಭಟಿಸಲಿದೆ. ಇದರ ಪರಿಣಾಮವಾಗಿ ಕರ್ನಾಟಕದಾದ್ಯಂತ ಡಿ. 6ರವರೆಗೂ ಮಳೆ ಅಬ್ಬರಿಸಲಿದೆ.

Karnataka Weather Today: ಇಂದಿನಿಂದ 4 ದಿನ ಕರ್ನಾಟಕದಲ್ಲಿ ಮಳೆ; ನಾಳೆ ಒಡಿಶಾಗೆ ಅಪ್ಪಳಿಸಲಿದೆ ಜವಾದ್ ಚಂಡಮಾರುತ
ಮಳೆ
TV9 Web
| Updated By: ಆಯೇಷಾ ಬಾನು|

Updated on: Dec 03, 2021 | 6:54 AM

Share

Bengaluru Rain: ಇನ್ನೇನು ಮಳೆಗಾಲ ಮುಗಿಯಿತು ಎನ್ನುವಷ್ಟರಲ್ಲಿ ಮತ್ತೆ ಆರ್ಭಟಿಸಲು ಶುರು ಮಾಡಿದ ಮಳೆರಾಯನಿಂದ ರೈತರು ಕಂಗಾಲಾಗಿದ್ದರು. ಭಾರೀ ಮಳೆಯಿಂದ ರೈತರು ಬೆಳೆದ ಬೆಳೆಗಳು ಕೊಳೆತು ಹೋಗುತ್ತಿವೆ. ಕಟಾವಿಗೆ ಬಂದ ಫಸಲನ್ನು ಒಣಗಿಸಲು ಸಾಧ್ಯವಾಗದೆ ಭತ್ತ, ಅಡಿಕೆ, ಕಾಫಿ ಮುಂತಾದ ಬೆಳೆಗಾರರು ಕಂಗಾಲಾಗಿದ್ದಾರೆ. ಇದರ ನಡುವೆ ಇದೀಗ ಚಂಡಮಾರುತದ ಆತಂಕವೂ ಎದುರಾಗಿದ್ದು, ನಾಳೆ (ಶನಿವಾರ) ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ (Cyclone Jawad) ಆರ್ಭಟಿಸಲಿದೆ. ಇದರ ಪರಿಣಾಮವಾಗಿ ಕರ್ನಾಟಕದಾದ್ಯಂತ ಡಿ. 6ರವರೆಗೂ ವರುಣನ ಆರ್ಭಟವಿರಲಿದೆ.

ಇಂದು ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ. ಇಂದಿನಿಂದ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತದ ಭೀತಿ ಆವರಿಸಿದೆ. ಜವಾದ್ ಚಂಡಮಾರುತದಿಂದಾಗಿ ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜವಾದ್ ಚಂಡಮಾರುತದಿಂದಾಗಿ, ಪಶ್ಚಿಮ ಬಂಗಾಳದ ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರ ಜಿಲ್ಲೆಗಳಲ್ಲಿ ಡಿಸೆಂಬರ್ 4ರಂದು ಭಾರೀ ಮಳೆಯಾಗಬಹುದು. ಹಾಗೇ, ಇಂದು ದೆಹಲಿ, ಗುಜರಾತ್ ಮತ್ತು ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ನಾಳೆ ನಿಜಕ್ಕೂ ಭಾರತಕ್ಕೆ ಚಂಡಮಾರುತ ಅಪ್ಪಳಿಸಿದರೆ ಇದು 2021ರ ಐದನೇ ಚಂಡಮಾರುತವಾಗಲಿದೆ. ಈ ಚಂಡಮಾರುತಕ್ಕೆ ಈಗಾಗಲೇ ಜವಾದ್ ಎಂದು ಹೆಸರಿಡಲಾಗಿದೆ. ಸೌದಿ ಅರೇಬಿಯಾದ ಪ್ರಕಾರ ಜವಾದ್ ಎಂದರೆ ಅರೇಬಿಕ್ ಭಾಷೆಯಲ್ಲಿ ಉದಾರ ಅಥವಾ ಕರುಣಾಮಯಿ ಎಂದರ್ಥ. ಇಂದು ಚಂಡಮಾರುತ ಸಹಿತ ಮಳೆಯಾಗುವುದರಿಂದ ಆಂಧ್ರಪ್ರದೇಶಕ್ಕೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ಕೂಡ ಭಾನುವಾರದಿಂದ ಮಳೆ ಹೆಚ್ಚಾಗಲಿದ್ದು, ಸೋಮವಾರ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಭಾರತದಲ್ಲಿ ನಾಳೆಯಿಂದ ಜವಾದ್ ಚಂಡಮಾರುತ ಅಪ್ಪಳಿಸುವುದರಿಂದ ಇಂದು ಉನ್ನತ ಅಧಿಕಾರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ. ಆಂಧ್ರಪ್ರದೇಶ, ಒಡಿಶಾದ ಪ್ರವಾಹ ಹಾಗೂ ಚಂಡಮಾರುತದ ಬಗ್ಗೆ ಅಧಿಕಾರಿಗಳಿಂದ ಪ್ರಧಾನಮಂತ್ರಿ ಮೋದಿ ಮಾಹಿತಿ ಪಡೆದಿದ್ದು, ಇಂದು ನಡೆಯುವ ಸಭೆಯಲ್ಲಿ ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ. ಈಗಾಗಲೇ ಒಡಿಶಾದ 14 ಜಿಲ್ಲೆಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲು ಸರ್ಕಾರ ಸೂಚಿಸಿದೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಕರಾವಳಿ ಸೇರಿ ಹಲವೆಡೆ ಡಿ. 4ರವರೆಗೆ ವ್ಯಾಪಕ ಮಳೆ; ಗುಜರಾತ್​ನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Weather Today: ಇಂದಿನಿಂದ 3 ದಿನ ಕರ್ನಾಟಕದಲ್ಲಿ ವ್ಯಾಪಕ ಮಳೆ; ಆಂಧ್ರ ಪ್ರದೇಶ, ಒಡಿಶಾದಲ್ಲಿ ಚಂಡಮಾರುತದ ಭೀತಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!