Karnataka Weather Today | ಬೆಂಗಳೂರಲ್ಲಿ ರಾತ್ರಿಯಿಡೀ ಮಳೆ; ಮಳೆಯ ಅಬ್ಬರ ಮಂಗಳವಾರದವರೆಗೂ ಮುಂದುವರೆಯುವ ಸಂಭವ

Karnataka Rains: ಬೆಂಗಳೂರಿನಲ್ಲಿ ನಿನ್ನೆ ಭಾರಿ ಮಳೆ ಸುರಿದಿದೆ. ಮಳೆಯ ಪರಿಣಾಮ ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ವಾಹ ಸವಾರರು ಪರದಾಡುವಂತಾಗಿದೆ. ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿರುವ ನೀರು ಸ್ಥಳೀಯ ನಿವಾಸಿಗಳಿಗೆ ನಿದ್ದೆಯಿಲ್ಲದ ರಾತ್ರಿಯನ್ನು ತಂದೊಡ್ಡಿದೆ.

Follow us
| Updated By: guruganesh bhat

Updated on:Sep 20, 2021 | 7:54 AM

Karnataka Rains |ಗಣೇಶ ಚತುರ್ಥಿ ಹಬ್ಬ ಕಳೆದರೂ ಕರ್ನಾಟಕದಲ್ಲಿ ಮಳೆದ ಅಬ್ಬರ ನಿಲ್ಲುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಕಳೆದ 2 ವಾರಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗ ಮೂರ್ನಾಲ್ಕು ದಿನಗಳ ಕಾಲ ಕೊಂಚ ಕಡಿಮೆಯಾಗಿದ್ದ ವರುಣನ ಆರ್ಭಟ ಇಂದಿನಿಂದ ಮತ್ತೆ ಮುಂದುವರೆಯಲಿದೆ. ಸೆಪ್ಟೆಂಬರ್ 21ರವರೆಗೂ,ಅಂದರೆ ನಾಳೆಯವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಎಲ್ಲ ಲಕ್ಷಣಗಳಿವೆ.

ಬೆಂಗಳೂರಿನಲ್ಲಿ ನಿನ್ನೆ ಭಾರಿ ಮಳೆ ಸುರಿದಿದೆ. ಮಳೆಯ ಪರಿಣಾಮ ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ವಾಹ ಸವಾರರು ಪರದಾಡುವಂತಾಗಿದೆ. ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿರುವ ನೀರು ಸ್ಥಳೀಯ ನಿವಾಸಿಗಳಿಗೆ ನಿದ್ದೆಯಿಲ್ಲದ ರಾತ್ರಿಯನ್ನು ತಂದೊಡ್ಡಿದೆ. ಬಿಬಿಎಂಪಿ ಎಚ್ಚೆತ್ತುಕೊಂಡಿದ್ದರೆ ಎಷ್ಟೇ ಮಳೆ ಸುರಿದರೂ ಸಮಸ್ಯೆ ಉಂಟಾಗುತ್ತಿರಲಿಲ್ಲ ಎಂದು ಸಮಸ್ಯೆ ಉಂಟಾದವರು ಅಲವತ್ತುಕೊಂಡಿದ್ದಾರೆ.

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಚಿಕ್ಕಮಗಳೂರು,ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಸೆಪ್ಟೆಂಬರ್ 21ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಸುರಿಯಲಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆ. 21ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನು ಮೂರು ದಿನ ಸಾಧಾರಣ ಮಳೆಯಾಗಲಿದೆ. ಇಂದಿನಿಂದ 3 ದಿನ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕ ಮಾತ್ರವಲ್ಲದೆ, ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒರಿಸ್ಸಾ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಮಹಾರಾಷ್ಟ್ರ, ಗೋವಾ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಲಡಾಖ್, ಕರ್ನಾಟಕದ ಒಳನಾಡು ಪ್ರದೇಶದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: 

ವಿಷ್ಣು ಆ ಚಿತ್ರದ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಬೇಕಿತ್ತು. ಆದರೆ..; ನಾಗತಿಹಳ್ಳಿ ಹಂಚಿಕೊಂಡ್ರು ಮಾಹಿತಿ

KCET 2021 result: ಸೆ. 20ಕ್ಕೆ ಕೆಸಿಇಟಿ ಫಲಿತಾಂಶ ಪ್ರಕಟ; ಇಲ್ಲಿದೆ ಸಂಪೂರ್ಣ ಮಾಹಿತಿ

(Karnataka weather Today expected Rainfall in Karnataka especially in Coastal Districts Karnataka Rain Yellow Alert Issued till September 21)

Published On - 6:56 am, Mon, 20 September 21

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ