AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಗುಲಾಬ್ ಚಂಡಮಾರುತದ ಪರಿಣಾಮ; ಕರಾವಳಿಯಲ್ಲಿ ಇಂದು ವಿಪರೀತ ಮಳೆ ಸಾಧ್ಯತೆ

Karnataka Rain | ಗುಲಾಬ್ ಚಂಡಮಾರುತದ ಪರಿಣಾಮದಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ವಿಪರೀತ ಮಳೆಯಾಗುವ ಸಾಧ್ಯತೆಯಿದೆ.

Karnataka Weather Today: ಗುಲಾಬ್ ಚಂಡಮಾರುತದ ಪರಿಣಾಮ; ಕರಾವಳಿಯಲ್ಲಿ ಇಂದು ವಿಪರೀತ ಮಳೆ ಸಾಧ್ಯತೆ
ಮಳೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 28, 2021 | 6:40 AM

Share

Cyclone Gulab: ಪಕ್ಕದ ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಗುಲಾಬ್ ಚಂಡಮಾರುತದ ಅಬ್ಬರ ಜೋರಾಗಿದೆ. ಒರಿಸ್ಸಾದಲ್ಲೂ ಚಂಡಮಾರುತ ಅಪ್ಪಳಿಸಿದ್ದು, ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಕೂಡ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಗುಲಾಬ್ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳು, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್​ಗಢ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಇನ್ನೆರಡು ದಿನ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರತದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಶೇ. 27ಕ್ಕೂ ಹೆಚ್ಚು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಗುಲಾಬ್ ಚಂಡಮಾರುತದ ಪರಿಣಾಮದಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ವಿಪರೀತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಹಾವೇರಿ, ವಿಜಯಪುರದಲ್ಲಿ ಇಂದು ಮಳೆಯಾಗಲಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಇನ್ನೆರಡು ದಿನ ಮುಂಗಾರು ಮುಂದುವರೆಯಲಿದೆ.

ಭಾನುವಾರ ರಾತ್ರಿ ಒರಿಸ್ಸಾ- ಆಂಧ್ರಪ್ರದೇಶದ ಗಡಿಭಾಗದಲ್ಲಿ ಗುಲಾಬ್ ಚಂಡಮಾರುತ ಅಪ್ಪಳಿಸಿತ್ತು. ಒಡಿಶಾದ ಗೋಪಾಲಪುರಂ ಮತ್ತು ಆಂಧ್ರಪ್ರದೇಶದ ಕಾಳಿಂಗಪಟ್ಟಣಂನಲ್ಲಿ ಚಂಡಮಾರುತವು ಭೂ ಪ್ರವೇಶ ಮಾಡಿತ್ತು. ಮಹಾರಾಷ್ಟ್ರ, ಛತ್ತೀಸ್​ಗಢ ಮುಂತಾದ ರಾಜ್ಯಗಳಲ್ಲಿ ಇಂದು ಗುಲಾಬ್ ಚಂಡಮಾರುತದ ಪರಿಣಾಮ ಹೆಚ್ಚಾಗಲಿದೆ. ಮಧ್ಯಪ್ರದೇಶ, ಬಿಹಾರ, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ಇಂದು ಗುಜರಾತ್, ಮಧ್ಯ ಮಹಾರಾಷ್ಟ್ರ, ಕೊಂಕಣ, ಗೋವಾ, ಪಶ್ಚಿಮ ಬಂಗಾಳ, ಮರಾಠವಾಡ, ಸೌರಾಷ್ಟ್ರ, ಕಚ್, ಮಧ್ಯಪ್ರದೇಶ, ವಿದರ್ಭ, ಛತ್ತೀಸ್​ಗಢ, ಜಾರ್ಖಂಡ್, ಆಂಧ್ರಪ್ರದೇಶದ ಕರಾವಳಿ ತೀರ, ತೆಲಂಗಾಣ, ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡು, ತಮಿಳುನಾಡು, ಪುದುಚೆರಿ, ಕೇರಳ, ಮಾಹೆಯಲ್ಲಿ ಇಂದು ಅತ್ಯಂತ ಹೆಚ್ಚು ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Karnataka Rain: ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ

Cyclone Gulab ಅಬ್ಬರಿಸಿದ ಗುಲಾಬ್ ಚಂಡಮಾರುತ: ಆಂಧ್ರ ಪ್ರದೇಶದ ಇಬ್ಬರು ಮೀನುಗಾರರು ಸಾವು, ಒಬ್ಬ ನಾಪತ್ತೆ

(Karnataka weather Today Heavy to Heavy Rain Predicted in Karnataka Coastal Areas as Cyclone Gulab Hits Bangalore Rain)

ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್​ಗೆ ಹೆಚ್ಚಿತು ಸಂಕಷ್ಟ
ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್​ಗೆ ಹೆಚ್ಚಿತು ಸಂಕಷ್ಟ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ