
ಬೆಂಗಳೂರು, ಜುಲೈ 24: ಕರ್ನಾಟಕದಲ್ಲಿ ಮುಂಗಾರು (Monsoon Rain) ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ನೀಡಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು (ಜುಲೈ 24) ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ರಜೆ ಘೋಷಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಕೆಲವೆಡೆ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಹಾವೇರಿ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ವ್ಯಕ್ತವಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ, ಹಾಸನ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಸಾಧಾರಣದಿಂದ ಮಧ್ಯಮ ಮಳೆಯಾಗಲಿದೆ.
ಜುಲೈ 25ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಗುರುವಾರ ಮಧ್ಯಾಹ್ನಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಹೆಚ್ಚು ಮಳೆ ದಾಖಲಾಗಿರುವ ಪ್ರದೇಶಗಳು ಇಂತಿವೆ:
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ