Karnataka Weather Today: ಮಲೆನಾಡು, ಕರಾವಳಿಯಲ್ಲಿ ಇನ್ನೆರಡು ದಿನ ಮಳೆ; ಬೆಂಗಳೂರಿನ ಇಂದಿನ ಹವಾಮಾನ ಹೀಗಿದೆ

Karnataka Rain Today | ಇಂದು ಮತ್ತು ನಾಳೆ ಕೂಡ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ.

Karnataka Weather Today: ಮಲೆನಾಡು, ಕರಾವಳಿಯಲ್ಲಿ ಇನ್ನೆರಡು ದಿನ ಮಳೆ; ಬೆಂಗಳೂರಿನ ಇಂದಿನ ಹವಾಮಾನ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Aug 11, 2021 | 6:16 AM

Karnataka Rains: ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ 2-3 ದಿನಗಳಿಂದ ಮತ್ತೆ ಸಾಧಾರಣ (Karnataka Rain) ಮಳೆಯಾಗುತ್ತಿದ್ದು, ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ಇಂದು ಮತ್ತು ನಾಳೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ಕರಾವಳಿ (Coastal Districts) , ಮಲೆನಾಡು (Malnad Region), ಕೊಡಗು (Kodagu) ಭಾಗಗಳಲ್ಲಿ ಮಳೆ ಹೆಚ್ಚಾಗಲಿದ್ದು, ಆ. 13ರಿಂದ ಮಳೆಯ ಅಬ್ಬರ ಕಡಿಮೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಇಡೀ ದಿನ ಮೋಡ ಕವಿದ ವಾತಾವರಣವಿರಲಿದೆ. ಸಂಜೆಯ ವೇಳೆಗೆ ಸಿಲಿಕಾನ್ ಸಿಟಿಯ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯೂ ಇದೆ.

ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಇಂದು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಈ ವಾರ ಮಳೆಯ ಆರ್ಭಟ ಹೆಚ್ಚಾಗಲಿದೆ. ಬೆಂಗಳೂರಿನಲ್ಲೂ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇಂದು ಕರಾವಳಿಯಲ್ಲಿ ಭಾರೀ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇಂದು ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಆ. 13ರವರೆಗೂ ಮಳೆ ಮುಂದುವರೆಯಲಿದೆ.

ಇನ್ನು, ಜುಲೈ ತಿಂಗಳ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ 2.3 ಲಕ್ಷ ಹೆಕ್ಟೇರ್ ಬೆಳೆ ಹಾನಿ ಉಂಟಾಗಿದೆ. ಮಳೆಯ ಹೊಡೆತಕ್ಕೆ 10,538 ಮನೆಗಳು ಹಾನಿಯಾಗಿವೆ. ವಿದ್ಯುತ್ ಕಂಬಗಳು, ಸೇತುವೆಗಳು ಮುರಿದು ಬಿದ್ದು ಕೋಟ್ಯಂತರ ರೂ. ನಷ್ಟವಾಗಿದೆ. ಹಲವಾರು ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ವರ್ಷದ ಪ್ರವಾಹದಲ್ಲಿ ಕರ್ನಾಟಕದ 14 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ನಷ್ಟ ಉಂಟಾಗಿದೆ.

ಕೇವಲ ಕರ್ನಾಟಕ ಮಾತ್ರವಲ್ಲದೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇಂದಿನಿಂದ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಾಖಂಡ, ಸಿಕ್ಕಿಂ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಇನ್ನೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ.

ಇದನ್ನೂ ಓದಿ: Karnataka Weather: ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ಹವಾಮಾನದಲ್ಲಿ ಬದಲಾವಣೆ ಗಾಳಿ; ಮಳೆಗೆ ಕೊಂಚ ಬಿಡುವು

Karnataka Dams Water Level: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Weather Today Rain Lashes in Bengaluru and Coastal Districts Today Karnataka Rains on Wednesday)