AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ವರ್ಷಾಂತ್ಯದವರೆಗೂ ಕರ್ನಾಟಕದಲ್ಲಿ ಚಳಿ ಮುಂದುವರಿಕೆ; ಪಂಜಾಬ್, ಹರಿಯಾಣದಲ್ಲಿ ಮಳೆ ಸಾಧ್ಯತೆ

Weather Forecast: ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಧಾರವಾಡ, ಹುಬ್ಬಳ್ಳಿ ಮುಂತಾದ ಜಿಲ್ಲೆಗಳಲ್ಲಿ ಈಗಾಗಲೇ ಚಳಿ ಹೆಚ್ಚಾಗಿ ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ದಾಖಲಾಗಿದೆ.

Karnataka Weather Today: ವರ್ಷಾಂತ್ಯದವರೆಗೂ ಕರ್ನಾಟಕದಲ್ಲಿ ಚಳಿ ಮುಂದುವರಿಕೆ; ಪಂಜಾಬ್, ಹರಿಯಾಣದಲ್ಲಿ ಮಳೆ ಸಾಧ್ಯತೆ
Karnataka Weather Today Winter Continues in Karnataka till New Year Rain Expected in Punjab, Haryana
TV9 Web
| Updated By: ಸುಷ್ಮಾ ಚಕ್ರೆ|

Updated on: Dec 25, 2021 | 6:05 AM

Share

ಬೆಂಗಳೂರು: ಕರ್ನಾಟಕದಲ್ಲಿ ಈ ತಿಂಗಳ ಅಂತ್ಯದವರೆಗೂ ಚಳಿ ಮುಂದುವರೆಯಲಿದೆ. ಮಳೆಗಾಲ ಕಡಿಮೆಯಾಗಿದ್ದು, ಶೀತಗಾಳಿ ಹೆಚ್ಚಾಗಿದೆ. ಈ ವರ್ಷಾಂತ್ಯಕ್ಕೆ ರಾಜ್ಯದ ಹಲವು ಭಾಗಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಧಾರವಾಡ, ಹುಬ್ಬಳ್ಳಿ ಮುಂತಾದ ಜಿಲ್ಲೆಗಳಲ್ಲಿ ಈಗಾಗಲೇ ಚಳಿ ಹೆಚ್ಚಾಗಿ ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಚಳಿಯು ಸಹಜ ತಾಪಮಾನಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ.

ಕರ್ನಾಟಕದಾದ್ಯಂತ ಹೆಚ್ಚಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಡಿಸೆಂಬರ್ 29, 1883ರಂದು ಅತ್ಯಂತ ಕಡಿಮೆ ಕನಿಷ್ಠ 8.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ 2011ರಲ್ಲಿ 12.8 ಡಿಗ್ರಿ, ಡಿಸೆಂಬರ್ 11, 2016ರಂದು 12 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಡಿಸೆಂಬರ್ 22, 2020ರಂದು ಬೆಂಗಳೂರಿನಲ್ಲಿ ಕನಿಷ್ಠ 14.20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಭಾರತೀಯ ಹವಾಮಾನ ಇಲಾಖೆಯು (IMD) ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಚದುರಿದ ಮಳೆ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಮತ್ತು ಇತರ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಚಂಡಮಾರುತವು ಡಿಸೆಂಬರ್ 26ರಿಂದ ವಾಯುವ್ಯ ಭಾರತದ ಮೇಲೆ ಮತ್ತು ಡಿಸೆಂಬರ್ 27ರಿಂದ ಮಧ್ಯ ಭಾರತದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು IMD ಹೇಳಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಡಿಸೆಂಬರ್ 26 ಮತ್ತು 27ರಂದು ರಾಜಸ್ಥಾನದಲ್ಲಿ ಪ್ರತ್ಯೇಕ ಮಳೆಯ ಮುನ್ಸೂಚನೆ ನೀಡಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ವಿದರ್ಭ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ.

ಡಿಸೆಂಬರ್ 26ರಂದು ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಹರಿಯಾಣದ ಉತ್ತರ ಭಾಗಗಳು ಮತ್ತು ಡಿಸೆಂಬರ್ 26 ಮತ್ತು 27ರಂದು ಉತ್ತರಾಖಂಡ ಮತ್ತು ವಾಯುವ್ಯ ಉತ್ತರ ಪ್ರದೇಶದ ಮೇಲೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಇಂದು ಪಂಜಾಬ್, ಹರಿಯಾಣ ಮತ್ತು ಈಶಾನ್ಯ ಭಾರತದ ಮೇಲೆ ದಟ್ಟವಾದ ಮಂಜು ಉಂಟಾಗಲಿದೆ. ವಾಯುವ್ಯ ರಾಜಸ್ಥಾನದಲ್ಲಿ ಇಂದು ಮತ್ತು ನಾಳೆ ಮಂಜು ಉಂಟಾಗಲಿದೆ.

IMD ಪ್ರಕಾರ, ಇಂದು ಪಂಜಾಬ್, ಹರಿಯಾಣ ಮತ್ತು ಈಶಾನ್ಯ ಭಾರತದಲ್ಲಿ ವಾಯುವ್ಯ ರಾಜಸ್ಥಾನದ ಮೇಲೆ ದಟ್ಟವಾದ ಮಂಜು ಆವರಿಸುತ್ತದೆ. ಜಮ್ಮು ಮತ್ತು ಕಾಶ್ಮೀರ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಮೇಲೆ ಚದುರಿದ ಹಿಮ ಅಥವಾ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್ ಮೇಲೆ ಪ್ರತ್ಯೇಕವಾದ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಮತ್ತು ಈಶಾನ್ಯ ಭಾರತದ ಮೇಲೆ ದಟ್ಟವಾದ ಮಂಜು ಆವರಿಸಲಿದೆ.

ಇದನ್ನೂ ಓದಿ: Karnataka Dams Water Level: ತಗ್ಗಿದ ಮಳೆ, ಹೆಚ್ಚಿದ ಚಳಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Winter Health Tips : ಚಳಿಗಾಲದಲ್ಲಿ ಕಾಡುವ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ದೂರವಿರಲು ಈ ಕ್ರಮಗಳನ್ನು ಅನುಸರಿಸಿ