AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ಮೊಂತಾ ಚಂಡಮಾರುತದ ಎಫೆಕ್ಟ್; ರಾಜ್ಯಾದ್ಯಂತ ಯೆಲ್ಲೋ ಅಲರ್ಟ್​

Karnataka Weather Tomorrow: ಮೋಂತಾ ಚಂಡಮಾರುತದ ಎಫೆಕ್ಟ್ ಹಿನ್ನಲೆ ರಾಜ್ಯಾದ್ಯಂತ ನಾಳೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ತುಸು ಹೆಚ್ಚಿರಲಿದ್ದು, ರಾಜಧಾನಿ ಬೆಂಗಳೂರಲ್ಲೂ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: ಮೊಂತಾ ಚಂಡಮಾರುತದ ಎಫೆಕ್ಟ್; ರಾಜ್ಯಾದ್ಯಂತ ಯೆಲ್ಲೋ ಅಲರ್ಟ್​
ಮಳೆImage Credit source: Google
ಪ್ರಸನ್ನ ಹೆಗಡೆ
|

Updated on: Oct 27, 2025 | 5:41 PM

Share

ಬೆಂಗಳೂರು, ಅಕ್ಟೋಬರ್​ 27: ಮೊಂತಾ ಚಂಡಮಾರುತದ ಎಫೆಕ್ಟ್ ಹಿನ್ನಲೆ ರಾಜ್ಯಾದ್ಯಂತ ನಾಳೆ ಯೆಲ್ಲೋ ಅಲರ್ಟ್ (Weather Forecast)​ ಘೋಷಿಸಲಾಗಿದೆ. ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದರೂ ಕಳೆದ ದಿನಗಳಿಗೆ ಹೋಲಿಸಿದರೆ ಮಳೆಯ ಪ್ರಮಾಣ ಕಡಿಮೆ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಮಳೆ ಮುಂದುವರಿಯಲಿದೆ. ಮಂಗಳೂರು ನಗರದಲ್ಲಿ ಸಾಧಾರಾಣ ಮಳೆಯಾಗಲಿದ್ದು, ಜಿಲ್ಲೆಯ ಉಳಿದೆಡೆ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ರಾಯಚೂರು ಸೇರಿ ಇತರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದೆ.  ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಗುಡುಗು-ಮಿಂಚಿನ ಸಹಿತ ಮಳೆಯ ನಿರೀಕ್ಷೆ ಇದೆ.

ಇದನ್ನೂ ಓದಿ: ಮೊಂತಾ ಚಂಡಮಾರುತ ಎಫೆಕ್ಟ್​: ಆಂಧ್ರ ಪ್ರದೇಶದ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರಿನಲ್ಲೂ ನಾಳೆ ವರುಣ ಅಬ್ಬರಿಸಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಸೋಮವಾರದ (ಅ.27) ರೀತಿಯಲ್ಲಿಯೇ ಅಲ್ಲಲ್ಲಿ ತುಂತುರು ಅಥವಾ ಸಾಧಾರಣ ಮಳೆ ಅಂದಾಜಿಸಲಾಗಿದೆ. ನಗರದ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್​ ಇರಲಿದೆ.

ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಮಳೆ

ಮೊಂತಾ ಚಂಡಮಾರುತ ಹಿನ್ನಲೆ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಸೇರಿದಂತೆ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆಯಲ್ಲೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಸಿಕ್ಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.