AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ಕರಾವಳಿಯಲ್ಲಿ ಮುಂದುವರಿಯಲಿದೆ ವರುಣನ ಅಬ್ಬರ, ಬೆಂಗಳೂರಲ್ಲೂ ರೇನ್​ ಅಲರ್ಟ್​

Karnataka Weather Tomorrow: ರಾಜ್ಯದಲ್ಲಿ ನಾಳೆಯೂ ವರುಣ ಅಬ್ಬರಿಸಲಿದ್ದು, ಕರಾವಳಿ ಮತ್ತು ಘಟ್ಟ ಪ್ರದೇಶದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಲ್ಲೂ ನಾಳೆ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ಬಳಿಕ ಗಾಳಿ ಸಹಿತ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: ಕರಾವಳಿಯಲ್ಲಿ ಮುಂದುವರಿಯಲಿದೆ ವರುಣನ ಅಬ್ಬರ, ಬೆಂಗಳೂರಲ್ಲೂ ರೇನ್​ ಅಲರ್ಟ್​
ಮಳೆ
ಪ್ರಸನ್ನ ಹೆಗಡೆ
|

Updated on:Oct 08, 2025 | 4:25 PM

Share

ಬೆಂಗಳೂರು, ಅಕ್ಟೋಬರ್​ 08: ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನ ಹೊರತುಪಡಿಸಿ ರಾಜ್ಯದ ಉಳಿದೆಡೆ ನಾಳೆ ಉತ್ತಮ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಮಳೆಯಾಗಲಿದ್ದು, ಕರಾವಳಿ ಮತ್ತು ಘಟ್ಟ ಪ್ರದೇಗಳಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆಗಳಿವೆ. ರಾಜಧಾನಿ ಬೆಂಗಳೂರಲ್ಲೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಎಲ್ಲೆಲ್ಲಿ ಮಳೆ?

ರಾಮನಗರ, ಚಾಮರಾಜನಗರ, ಕೋಲಾರ, ಹಾಸನ, ಮೈಸೂರು, ಮಂಡ್ಯ, ಮತ್ತು ತುಮಕೂರು ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಈ ಜಿಲ್ಲೆಗಳ ಬಹುತೇಕ ಪ್ರದೇಶಗಳು ಮೋಡದಿಂದ ಕೂಡಿರಲಿದ್ದು, 5 ಮಿ.ಮೀ.ಯಿಂದ 30 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗದಲ್ಲೂ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ಗದಗದಲ್ಲೂ ಇದೇ ರೀತಿಯ ವಾತಾವರಣ ಇರಲಿದೆ. ಕಲ್ಯಾಣ ಕರ್ನಾಟಕದ ಭಾಗದ ಬೀದರ್​, ಕಲಬುರಗಿ, ಯಾದಗಿರಿಯಲ್ಲಿ ಬಹುತೇಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದ್ದು, 10 ಮಿ.ಮೀ.ಯಿಂದ 30 ಮಿ.ಮೀ ಮಳೆಯಾಗುವ ಸಾಧ್ಯತೆ ಅಂದಾಜಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಮಳೆಗೆ ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ

ಮುಂದಿನ 2-3 ದಿನ ಬೆಂಗಳೂರಲ್ಲಿ ಮಳೆ ಇಂದು ಬೆಳಗ್ಗೆಯಿಂದ ಬಿಟ್ಟು ಬಿಟ್ಟು ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಮಳೆಯಾಗುತ್ತಿದ್ದು, ಇದೇ ರೀತಿಯ ವಾತಾವರಣ ಮುಂದಿನ 2-3 ದಿನಗಳವರೆಗೆ ಮುಂದುವರಿಯಲಿದೆ. ನಾಳೆ ಬೆಳಿಗ್ಗೆ ವೇಳೆ ಕೊಂಚ ಬಿಸಿಲಿನ ವಾತಾವರಣ ಕಂಡುಬಂದರೂ ಮಧ್ಯಾಹ್ನ 2 ಗಂಟೆ ಬಳಿಕ ಅಥವಾ ಸಂಜೆ ಹೊತ್ತಿಗೆ ಬೆಂಗಳೂರಲ್ಲಿ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಗುಡುಗು-ಗಾಳಿ ಸಹಿತ ಮಳೆಯನ್ನು ಅಂದಾಜಿಸಲಾಗಿದೆ. ಸಿಲಿಕಾನ್​ ಸಿಟಿಯಲ್ಲಿ ನಾಳೆ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ಇರಲಿದೆ.

ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:23 pm, Wed, 8 October 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ