AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: ಕರಾವಳಿಯಲ್ಲಿ ಮುಂದುವರಿಯಲಿದೆ ವರುಣನ ಅಬ್ಬರ, ಬೆಂಗಳೂರಲ್ಲೂ ರೇನ್​ ಅಲರ್ಟ್​

Karnataka Weather Tomorrow: ರಾಜ್ಯದಲ್ಲಿ ನಾಳೆಯೂ ವರುಣ ಅಬ್ಬರಿಸಲಿದ್ದು, ಕರಾವಳಿ ಮತ್ತು ಘಟ್ಟ ಪ್ರದೇಶದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಲ್ಲೂ ನಾಳೆ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ಬಳಿಕ ಗಾಳಿ ಸಹಿತ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: ಕರಾವಳಿಯಲ್ಲಿ ಮುಂದುವರಿಯಲಿದೆ ವರುಣನ ಅಬ್ಬರ, ಬೆಂಗಳೂರಲ್ಲೂ ರೇನ್​ ಅಲರ್ಟ್​
ಮಳೆ
ಪ್ರಸನ್ನ ಹೆಗಡೆ
|

Updated on:Oct 08, 2025 | 4:25 PM

Share

ಬೆಂಗಳೂರು, ಅಕ್ಟೋಬರ್​ 08: ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನ ಹೊರತುಪಡಿಸಿ ರಾಜ್ಯದ ಉಳಿದೆಡೆ ನಾಳೆ ಉತ್ತಮ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಮಳೆಯಾಗಲಿದ್ದು, ಕರಾವಳಿ ಮತ್ತು ಘಟ್ಟ ಪ್ರದೇಗಳಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆಗಳಿವೆ. ರಾಜಧಾನಿ ಬೆಂಗಳೂರಲ್ಲೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಎಲ್ಲೆಲ್ಲಿ ಮಳೆ?

ರಾಮನಗರ, ಚಾಮರಾಜನಗರ, ಕೋಲಾರ, ಹಾಸನ, ಮೈಸೂರು, ಮಂಡ್ಯ, ಮತ್ತು ತುಮಕೂರು ಜಿಲ್ಲೆಗಳಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಈ ಜಿಲ್ಲೆಗಳ ಬಹುತೇಕ ಪ್ರದೇಶಗಳು ಮೋಡದಿಂದ ಕೂಡಿರಲಿದ್ದು, 5 ಮಿ.ಮೀ.ಯಿಂದ 30 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗದಲ್ಲೂ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ಗದಗದಲ್ಲೂ ಇದೇ ರೀತಿಯ ವಾತಾವರಣ ಇರಲಿದೆ. ಕಲ್ಯಾಣ ಕರ್ನಾಟಕದ ಭಾಗದ ಬೀದರ್​, ಕಲಬುರಗಿ, ಯಾದಗಿರಿಯಲ್ಲಿ ಬಹುತೇಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದ್ದು, 10 ಮಿ.ಮೀ.ಯಿಂದ 30 ಮಿ.ಮೀ ಮಳೆಯಾಗುವ ಸಾಧ್ಯತೆ ಅಂದಾಜಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಮಳೆಗೆ ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ

ಮುಂದಿನ 2-3 ದಿನ ಬೆಂಗಳೂರಲ್ಲಿ ಮಳೆ ಇಂದು ಬೆಳಗ್ಗೆಯಿಂದ ಬಿಟ್ಟು ಬಿಟ್ಟು ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಮಳೆಯಾಗುತ್ತಿದ್ದು, ಇದೇ ರೀತಿಯ ವಾತಾವರಣ ಮುಂದಿನ 2-3 ದಿನಗಳವರೆಗೆ ಮುಂದುವರಿಯಲಿದೆ. ನಾಳೆ ಬೆಳಿಗ್ಗೆ ವೇಳೆ ಕೊಂಚ ಬಿಸಿಲಿನ ವಾತಾವರಣ ಕಂಡುಬಂದರೂ ಮಧ್ಯಾಹ್ನ 2 ಗಂಟೆ ಬಳಿಕ ಅಥವಾ ಸಂಜೆ ಹೊತ್ತಿಗೆ ಬೆಂಗಳೂರಲ್ಲಿ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಗುಡುಗು-ಗಾಳಿ ಸಹಿತ ಮಳೆಯನ್ನು ಅಂದಾಜಿಸಲಾಗಿದೆ. ಸಿಲಿಕಾನ್​ ಸಿಟಿಯಲ್ಲಿ ನಾಳೆ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ಇರಲಿದೆ.

ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:23 pm, Wed, 8 October 25

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ