AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಹವಾಮಾನ: 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​; ಕರವಾಳಿ, ಮಲೆನಾಡಲ್ಲಿ ಧಾರಾಕಾರ ಮಳೆ ನಿರೀಕ್ಷೆ

Karnataka Weather Tomorrow: ಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುವ ನಿರೀಕ್ಷೆ ಇದ್ದು, ನಾಳೆ 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆ ಇದ್ದು, ಉತ್ತರ ಒಳನಾಡು ಭಾಗದಲ್ಲೂ ವರುಣ ತಂಪೆರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯ ಹವಾಮಾನ: 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​; ಕರವಾಳಿ, ಮಲೆನಾಡಲ್ಲಿ ಧಾರಾಕಾರ ಮಳೆ ನಿರೀಕ್ಷೆ
ಮಳೆ
ಪ್ರಸನ್ನ ಹೆಗಡೆ
|

Updated on: Oct 21, 2025 | 5:21 PM

Share

ಬೆಂಗಳೂರು, ಅಕ್ಟೋಬರ್​ 21: ರಾಜ್ಯದಲ್ಲಿ ಮಳೆ ಮತ್ತಷ್ಟು ದಿನ ಮುಂದುವರಿಯುವ ಸಾಧ್ಯತೆ (Weather Forecast) ಇದ್ದು, 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗಲಿರುವ ಹಿನ್ನಲೆ ಯೆಲ್ಲೋ ಅಲರ್ಟ್​ ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದು, ಚಾಮರಾಜನಗರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ವರುಣಾರ್ಭಟ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಹೆಚ್ಚಿನ ಪ್ರಮಾಣದ ಗಾಳಿಯೂ ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: ಎಚ್ಚರ ಎಚ್ಚರ…ಕರ್ನಾಟಕದಲ್ಲಿ ಭಾರಿ ಎಚ್ಚರಿಕೆ: ಎಲ್ಲಿಯವರೆಗೆ ಗೊತ್ತಾ..?

ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್​ ಅಲರ್ಟ್​ ಇರಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಗಾಳಿ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಲ್ಲಿ ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶೇಕಡಾ 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾವಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ