
ಬೆಂಗಳೂರು, ಜೂನ್ 07): ಕರ್ನಾಟಕದಲ್ಲಿ ಮುಂಗಾರು (karnataka monsoon) ಚುರುಕುಗೊಂಡಿದ್ದು, ಇಂದಿನಿಂದ ಏಳು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ (karnataka Rains) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ವಿಪರೀತವಾಗಲಿದ್ದು, ಹವಾಮಾನ ಇಲಾಖೆಯು ಈ ಭಾಗಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಈ ಭಾಗದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, 204.5 ಮಿ.ಮೀ ಗಿಂತ ಹೆಚ್ಚು ವಿಪರೀತ ಮಳೆಯಾಗುವ ನಿರೀಕ್ಷೆ ಇದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ಕರಾವಳಿ ಜಿಲ್ಲೆಗಳಲ್ಲಿ ಜೂನ್ 9 ರವರೆಗೆ, ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.#KSNDMC pic.twitter.com/aVWT3MTf7B
— Karnataka State Natural Disaster Monitoring Centre (@KarnatakaSNDMC) June 7, 2026
ಭಾರೀ ಮಳೆ ಇರುವುದರಿಂದ ಈ ಭಾಘದ ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಇರುವುದರಿಂದ ಈ ಪ್ರದೇಶದ ಜನರಿಗೆ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಇನ್ನು ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್ ಮುಂದುವರಿಯಲಿದೆ.
ಬೆಂಗಳೂರು ಮತ್ತು ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ತುಮಕೂರು ಭಾಗದಲ್ಲಿಯೂ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜೂನ್ 12 ರವರೆಗೆ ಹಗುರದಿಂದ ಸಾಧಾರಣ ಹಾಗೂ ಕೆಲವು ಕಡೆ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳು ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ.#KSNDMC #ಎಚ್ಚರಿಕೆವಹಿಸಿ
Next 5 days #SouthwestMonsoon #Rainfall #forecast maps for #Karnataka state with district-wise warnings.
Source: @Indiametdept @KarnatakaVarthe #KarnataKaRains pic.twitter.com/v2g4rAcplG— Karnataka State Natural Disaster Monitoring Centre (@KarnatakaSNDMC) June 7, 2026
ಉತ್ತರ ಕರ್ನಾಟಕ: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಜೂನ್ 10 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯ ಕರಾವಳಿಗೆ ಮುಂಗಾರು ಪ್ರವೇಶ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ದಕ್ಷಿಣಕನ್ನಡ ಜಿಲ್ಲೆಗೆ NDRF ತಂಡ ಆಗಮಿಸಿದೆ. ಒಟ್ಟು 30 ಸದಸ್ಯರಿರುವ ತಂಡ ಸದ್ಯ ಪುತ್ತೂರಿನಲ್ಲಿ ಮೊಕ್ಕಾಂ ಹೂಡಿದ್ದು, ಎಲ್ಲಾ ರೀತಿಯ ಸನ್ನಿವೇಶಗಳನ್ನು ಎದುರಿಸಲು ಸಿದ್ಧವಾಗಿದೆ. ಪ್ರವಾಹ ವಿಪತ್ತು,ಕಟ್ಟಡ ಕುಸಿತ,ರಾಸಾಯನಿಕ ವಿಪತ್ತು,ವಿಕಿರಣ ವಿಪತ್ತು ಸೇರಿದಂತೆ ಎಲ್ಲಾ ರೀತಿಯ ಸನ್ನಿವೇಶ ಎದುರಿಸಲಿದೆ.
Published On - 5:41 pm, Sun, 7 June 26