AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Report: ಕಳೆದ 24 ಗಂಟೆಯಲ್ಲಿ ಕರ್ನಾಟಕ ಯಾವ ಭಾಗದಲ್ಲಿ ಅತಿ ಹೆಚ್ಚು ಮಳೆ?

ಕರ್ನಾಟಕ ಮಳೆ, ಹವಾಮಾನ ವರದಿ: ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ಅತಿ ಹೆಚ್ಚು ಅಂದರೆ 139 ಮಿ.ಮೀ ಮಳೆ ದಾಖಲಾಗಿದ್ದು,108.5 ಮಿ.ಮೀ ಮಳೆ ದಾಖಲಿಸುವ ಮೂಲಕ ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹಿರೇಯಂಗಡಿ ಎರಡನೇ ಸ್ಥಾನದಲ್ಲಿದೆ. ಈ ನಡುವೆ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಮುಂದುವರಿಸಿದೆ.

Karnataka Weather Report: ಕಳೆದ 24 ಗಂಟೆಯಲ್ಲಿ ಕರ್ನಾಟಕ ಯಾವ ಭಾಗದಲ್ಲಿ ಅತಿ ಹೆಚ್ಚು ಮಳೆ?
ಮಳೆImage Credit source: Tv9 Kannada
ಪ್ರಸನ್ನ ಹೆಗಡೆ
| Edited By: |

Updated on:Jul 03, 2026 | 5:51 PM

Share

ಮುಖ್ಯಾಂಶಗಳು

  • ಕಳೆದ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ
  • ದಕ್ಷಿಣ ಕನ್ನಡದ ಕೊಳ್ತಿಗೆಯಲ್ಲಿ ಅತ್ಯಧಿಕ ಮಳೆ ದಾಖಲು
  • ಉತ್ತರ ಕನ್ನಡದ ಹೊನ್ನಾವರದ ಹಿರೇಯಂಗಡಿಗೆ 2ನೇ ಸ್ಥಾನ

ಬೆಂಗಳೂರು, ಜುಲೈ 03: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಮಳೆಯಾಗುತ್ತಿದ್ದು, ನಾಳೆ (ಜುಲೈ 04) ಕೂಡ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹವಾಮಾಮಾನ ಇಲಾಖೆ ಆರೆಂಜ್​ ಅಲರ್ಟ್​​ ಘೋಷಣೆ ಮಾಡಿದೆ. ಈ ನಡುವೆ ಜುಲೈ 2ರ ಬೆಳಿಗ್ಗೆ 8:30ರಿಂದ ಜುಲೈ 3ರ ಬೆಳಿಗ್ಗೆ 7:30ರವರೆಗೆ 50 ಮಿ.ಮೀ.ಗಿಂತ ಹೆಚ್ಚು ಮಳೆ ದಾಖಲಿಸಿದ ಟೆಲಿಮೆಟ್ರಿಕ್ ಮಳೆಮಾಪನ ಕೇಂದ್ರಗಳ ವಿವರ ಬಹಿರಂಗಗೊಂಡಿದೆ. ಆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ಅತಿ ಹೆಚ್ಚು ಅಂದರೆ 139 ಮಿಲಿ ಮೀಟರ್​​ ಮಳೆಯಾಗಿದೆ.

ಕರ್ನಾಟಕದಲ್ಲಿ ಜುಲೈ 2ರಂದು ಅಧಿಕ ಮಳೆಯಾದ ಸ್ಥಳಗಳು

108.5 ಮಿ.ಮೀ ಮಳೆ ದಾಖಲಿಸುವ ಮೂಲಕ ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹಿರೇಯಂಗಡಿ ಎರಡನೇ ಸ್ಥಾನದಲ್ಲಿದ್ದರೆ, ಇದೇ ತಾಲೂಕಿನ ಜಲವಳ್ಳಿ 104.5 ಮಿ.ಮೀ ಮತ್ತು ನಗರಬಸ್ತಿಕೇರಿ 100.5 ಮಿ.ಮೀ ದಾಖಲಿಸುವ ಮೂಲಕ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಮೇಲಿನ ಇಡಗುಂಜಿ 97.5 ಮಿ.ಮೀ, ಹಡಿನಬಾಳ 93.5 ಮಿ.ಮೀ, ಖರ್ವಾ 91 ಮಿ.ಮೀ, ಕುದ್ರಿಗಿ 91 ಮಿ.ಮೀ ಮತ್ತು ಕೆಳಗಿನೂರಿನಲ್ಲಿ 89.5 ಮಿ.ಮೀ, ಮಳೆಯಾಗಿದೆ.

ಇದನ್ನೂ ಓದಿ: ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್​​ ಅಲರ್ಟ್​; ಜುಲೈ 5ರ ವರೆಗೂ ಭಾರಿ ವರ್ಷಧಾರೆ

ಹಾಗೆಯೇ ಅಂಕೋಲಾ ತಾಲೂಕಿಮ ಹಿಲ್ಲೂರಿನಲ್ಲಿ 87 ಮಿ.ಮೀ, ಹೊನ್ನಾವರದ ಕಾಸರಕೋಡಿನಲ್ಲಿ 85 ಮಿ.ಮೀ, ಮುಗ್ವಾ 78.5 ಮಿ.ಮೀ, ಬಳ್ಕೂರಿನಲ್ಲಿ 78 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಪಡುಮಾರ್ನಾಡ್​ನಲ್ಲಿ 77.5ಮಿ.ಮೀ, ಹೊನ್ನಾವರದ ಚಿಕ್ಕನಕೋಡದಲ್ಲಿ 76.5 ಮಿ.ಮೀ ಮತ್ತು ಕೊಡಾಣಿಯಲ್ಲಿ 74.5 ಮಿ.ಮೀ ಮಳೆಯ ಪ್ರಮಾಣ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:37 pm, Fri, 3 July 26

Follow Us
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್