AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Update: ಉತ್ತರ ಕರ್ನಾಟಕದ 7 ಜಿಲ್ಲೆಗಳಲ್ಲಿ ಮುಂದಿನ 2-3 ದಿನ ಉಷ್ಣಾಂಶ ಹೆಚ್ಚಳ ಸಾಧ್ಯತೆ

ಬೆಂಗಳೂರಿನ ಮಾರ್ಚ್ ತಿಂಗಳ ವಾಡಿಕೆ ಗರಿಷ್ಠ ಉಷ್ಣಾಂಶ 33.1 ಡಿಗ್ರಿ ಸೆಲ್ಸಿಯಸ್ ಇದೆ. ಶುಕ್ರವಾರ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ವಾಡಿಕೆ ಪ್ರಮಾಣಕ್ಕಿಂತ 3.3 ಡಿಗ್ರಿ ಸೆಲ್ಸಿಯಸ್ ಹೆಚ್ಚು ದಾಖಲಾಗಿದೆ. ಮುಂದಿನ 24 ಗಂಟೆ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 36 ​ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

Karnataka Weather Update: ಉತ್ತರ ಕರ್ನಾಟಕದ 7 ಜಿಲ್ಲೆಗಳಲ್ಲಿ ಮುಂದಿನ 2-3 ದಿನ ಉಷ್ಣಾಂಶ ಹೆಚ್ಚಳ ಸಾಧ್ಯತೆ
ತಾಪಮಾನ
ವಿವೇಕ ಬಿರಾದಾರ
|

Updated on: Mar 30, 2024 | 7:38 AM

Share

ಬೆಂಗಳೂರು, ಮಾರ್ಚ್​ 30: ರಾಜ್ಯಾದ್ಯಂತ ಮುಂದಿನ 24 ಒಣಹವೆ ಬೀಸಲಿದೆ. ಮುಂದಿನ ಮೂರು ದಿನಗಳ ಕಾಲ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನವು (Temperature) 2 ರಿಂದ 3 ಡಿಗ್ರಿ ಸೆಲ್ಸಿಯಸ್​ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ (North Karnataka) ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 24 ಗಂಟೆ ಬೆಂಗಳೂರು (Bengaluru) ನಗರದಲ್ಲಿ ಗರಿಷ್ಠ ಉಷ್ಣಾಂಶ 36 ​ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ವಾಡಿಕೆಗಿಂತ 3.3 ಡಿಗ್ರಿ ಹೆಚ್ಚಳ:

ಬೆಂಗಳೂರಿನ ಮಾರ್ಚ್ ತಿಂಗಳ ವಾಡಿಕೆ ಗರಿಷ್ಠ ಉಷ್ಣಾಂಶ 33.1 ಡಿಗ್ರಿ ಸೆಲ್ಸಿಯಸ್ ಇದೆ. ಶುಕ್ರವಾರ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ವಾಡಿಕೆ ಪ್ರಮಾಣಕ್ಕಿಂತ 3.3 ಡಿಗ್ರಿ ಸೆಲ್ಸಿಯಸ್ ಹೆಚ್ಚು ದಾಖಲಾಗಿದೆ. ಏಪ್ರಿಲ್‌ನಲ್ಲಿ ವಾಡಿಕೆ ಗರಿಷ್ಠ ಉಷ್ಣಾಂಶದಲ್ಲಿ ಮತ್ತೊಂದು ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ.

ಇದನ್ನೂ ಓದಿ: ಬಿಸಿಲಿನ ತಾಪಮಾನ ಏರುತ್ತಿದಂತೆ ಬಡವರ ಫ್ರಿಡ್ಜ್​​ಗೆ ಭಾರಿ ಡಿಮ್ಯಾಂಡ್, ಬೀದರ್​ನಲ್ಲಿ ಮಡಿಕೆಗಾಗಿ ಸರತಿ ಸಾಲಿನಲ್ಲಿ ನಿಂತ ಜನ

7 ಜಿಲ್ಲೆಗಳಲ್ಲಿ ಉಷ್ಣ ಅಲೆ ಭೀತಿ:

ಉತ್ತರ ಒಳನಾಡಿನ ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡೂರು ದಿನ ಆಕಾಶ ಶುಭ್ರವಾಗಿರಲಿದ್ದು, ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದ್ದು, ಈಗಾಗಲೇ ಗರಿಷ್ಠ ಉಷ್ಣಾಂಶ 40 ಡಿಗ್ರಿ, ಸೆಲ್ಸಿಯಸ್‌ ಗಡಿ ತಲುಪಿದೆ. ಹೀಗಾಗಿ, ಈ ಜಿಲ್ಲೆಗಳಿಗೆ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?