
ಬೆಂಗಳೂರು, ನವೆಂಬರ್ 28: ರಾಜ್ಯದಲ್ಲಿ ಆರಂಭಗೊಂಡಿರುವ ಚಳಿಯ ನಡುವೆ ರಾಜ್ಯದ ಕೆಲವೆಡೆ ನಾಳೆ (ನ.29) ಮತ್ತು ನಾಡಿದ್ದು (ನ.30) ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯ ಕರ್ನಾಟಕ, ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಕಂಡುಬರಲಿದೆ. ಬೆಂಗಳೂರು ನಗರದಲ್ಲಿಯೂ ಮೋಡಕವಿದ ವಾತಾವರಣದ ಇರುವ ಸಾಧ್ಯತೆ ಇದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು.#KSNDMC #ಎಚ್ಚರಿಕೆವಹಿಸಿ
Next 5 days #Rainfall #Forecast maps for the #Karnataka state with district-wise warnings. Source: IMD Bengaluru@KarnatakaVarthe #KarnatakaRains pic.twitter.com/qS9cNijzt1— Karnataka State Natural Disaster Monitoring Centre (@KarnatakaSNDMC) November 28, 2025
ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಯ ಕೆಲವೆಡೆ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಕಂಡುಬರಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವೆಡೆ ಸಣ್ಣ ಚಳಿಯ ಅನುಭವ ಜನರಿಗೆ ಆಗಲಿದೆ.
ಇದನ್ನೂ ಓದಿ: ಚಳಿಯನ್ನೂ ಲೆಕ್ಕಿಸದೆ ಮೈದಾನದಲ್ಲೇ ಮಲಗಿದ ಆರ್ಮಿ ಸೇರಲು ಬಂದ ಯುವಕರು!
ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಟಾಂಶ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಧ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಗಾಳಿಯ ವೇಗ ಗಂಟೆಗೆ 06-15ಕಿಲೋ ಮೀಟರ್ನಷ್ಟು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:58 pm, Fri, 28 November 25