ನಾಳೆಯ ಹವಾಮಾನ: ಚಳಿಯ ನಡುವೆ ವರುಣನ ಅಬ್ಬರ; ಯಾವ್ಯಾವ ಜಿಲ್ಲೆಗಳಲ್ಲಿ ನಾಳೆ ಮಳೆ?

Karnataka Weather Tomorrow: ರಾಜ್ಯದಲ್ಲಿ ಚಳಿಯ ನಡುವೆ ನವೆಂಬರ್ 29 ಮತ್ತು 30 ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯ, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಜಿಲ್ಲೆಗಳಲ್ಲಿ ಚಳಿಯ ಅನುಭವವಾಗಲಿದೆ.

ನಾಳೆಯ ಹವಾಮಾನ: ಚಳಿಯ ನಡುವೆ ವರುಣನ ಅಬ್ಬರ; ಯಾವ್ಯಾವ ಜಿಲ್ಲೆಗಳಲ್ಲಿ ನಾಳೆ ಮಳೆ?
ಮಳೆ

Updated on: Nov 28, 2025 | 6:00 PM

ಬೆಂಗಳೂರು, ನವೆಂಬರ್​​ 28: ರಾಜ್ಯದಲ್ಲಿ ಆರಂಭಗೊಂಡಿರುವ ಚಳಿಯ ನಡುವೆ ರಾಜ್ಯದ ಕೆಲವೆಡೆ ನಾಳೆ (ನ.29) ಮತ್ತು ನಾಡಿದ್ದು (ನ.30) ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯ ಕರ್ನಾಟಕ, ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಕಂಡುಬರಲಿದೆ. ಬೆಂಗಳೂರು ನಗರದಲ್ಲಿಯೂ ಮೋಡಕವಿದ ವಾತಾವರಣದ ಇರುವ ಸಾಧ್ಯತೆ ಇದೆ.

ರಾಜ್ಯದ ಎಲ್ಲೆಲ್ಲಿ ಮಳೆ?


ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಯ ಕೆಲವೆಡೆ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್​​, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಕಂಡುಬರಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವೆಡೆ ಸಣ್ಣ ಚಳಿಯ ಅನುಭವ ಜನರಿಗೆ ಆಗಲಿದೆ.

ಇದನ್ನೂ ಓದಿ: ಚಳಿಯನ್ನೂ ಲೆಕ್ಕಿಸದೆ ಮೈದಾನದಲ್ಲೇ ಮಲಗಿದ ಆರ್ಮಿ ಸೇರಲು ಬಂದ ಯುವಕರು!

ಹೇಗಿರಲಿದೆ ಬೆಂಗಳೂರು ವಾತಾವರಣ?

ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಟಾಂಶ 27 ಡಿಗ್ರಿ ಸೆಲ್ಸಿಯಸ್​​ ಮತ್ತು ಕನಿಷ್ಠ ಉಷ್ಣಾಂಧ 17 ಡಿಗ್ರಿ ಸೆಲ್ಸಿಯಸ್​​ ದಾಖಲಾಗಲಿದೆ. ಗಾಳಿಯ ವೇಗ ಗಂಟೆಗೆ 06-15ಕಿಲೋ ಮೀಟರ್​​ನಷ್ಟು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:58 pm, Fri, 28 November 25