AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಜ್ಯದಲ್ಲಿ ಇಂದು-ನಾಳೆ ವಿಪರೀತ ಮಳೆ; ಕರಾವಳಿ, ಮಲೆನಾಡು ಭಾಗಗಳಲ್ಲಿ ಆರೆಂಜ್​ ಅಲರ್ಟ್​​

Karnataka Rain: ಗುರುವಾರ ಮತ್ತು ಶುಕ್ರವಾರ (ಇಂದು-ನಾಳೆ) ಕರಾವಳಿ ಹಾಗೂ ದಕ್ಷಿಣ ಭಾಗಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಐಎಂಡಿ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದೆ. ಹಾಗೇ, ಉತ್ತರ ಕರ್ನಾಟಕದ ಭಾಗಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಆಗಿದೆ.

Karnataka Weather: ರಾಜ್ಯದಲ್ಲಿ ಇಂದು-ನಾಳೆ ವಿಪರೀತ ಮಳೆ; ಕರಾವಳಿ, ಮಲೆನಾಡು ಭಾಗಗಳಲ್ಲಿ ಆರೆಂಜ್​ ಅಲರ್ಟ್​​
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Jul 22, 2021 | 10:38 AM

Share

ಜು.23ರೊಳಗೆ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಗಾರು ಮಳೆ ಪ್ರಮಾಣ ಹೆಚ್ಚಾಗಲಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದ ಮೇಲೆ ಮತ್ತಷ್ಟು ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಮಲೆನಾಡು, ಕರಾವಳಿಗಳಲ್ಲಿ ಕಳೆದ ಎರಡು ವಾರಗಳಿಂದಲೂ ಮಳೆ ಸುರಿಯುತ್ತಿದ್ದು(Karnataka Rain), ಎರಡು ದಿನಗಳಿಂದ ಗಾಳಿಯ ಮಟ್ಟವೂ ಹೆಚ್ಚಾಗಿದೆ. ಅದರಲ್ಲೂ ಜು.22 ಮತ್ತು 23 (ಗುರುವಾರ ಮತ್ತು ಶುಕ್ರವಾರ) ರಾಜ್ಯಾದ್ಯಂತ ಇನ್ನಷ್ಟು ಮಳೆ (Rainfall)ಯಾಗುವ ಸಾಧ್ಯತೆ ಇದೆ ಎಂದು ಐಎಂಡಿ (IMD) ಹೇಳಿದೆ. ಆದರೆ ಕರಾವಳಿ ತೀರ ಮತ್ತು ದಕ್ಷಿಣ ಭಾಗಗಳಲ್ಲಿ ಮುಂದಿನ 5ದಿನಗಳವರೆಗೂ ಮಳೆ ಮುಂದುವರಿಯಲಿದ್ದು, ಉತ್ತರ ಕರ್ನಾಟಕದ ಭಾಗಗಳಲ್ಲಿ ಜು.24ರಿಂದ ಕಡಿಮೆಯಾಗಬಹುದು ಎಂದೂ ಅಂದಾಜಿಸಿದೆ.

ಗುರುವಾರ ಮತ್ತು ಶುಕ್ರವಾರ (ಇಂದು-ನಾಳೆ) ಕರಾವಳಿ ಹಾಗೂ ದಕ್ಷಿಣ ಭಾಗಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಐಎಂಡಿ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದೆ. ಹಾಗೇ, ಉತ್ತರ ಕರ್ನಾಟಕದ ಭಾಗಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಆಗಿದೆ. ಅಂದರೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಸಾಲಿಗೆ ಸೇರುವ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಘಟ್ಟ ಪ್ರದೇಶಗಳಲ್ಲಿ ಈಗಾಗಲೇ ಆರೆಂಜ್​ ಅಲರ್ಟ್ ಘೋಷಣೆಯಾಗಿದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಹವಾಮಾನ (Bangalore Weather) ಬೆಂಗಳೂರಿನಲ್ಲಿ ಭಾನುವಾರ ಅಂದರೆ ಜುಲೈ 25ರವರೆಗೂ ಮೋಡಸಹಿತ ವಾತಾವರಣ ಮುಂದುವರಿಯಲ್ಲಿದ್ದು, ಸಣ್ಣಪ್ರಮಾಣದ ಮಳೆ ಬೀಳಬಹುದು. ವಾರಾಂತ್ಯದವರೆಗೂ ತಾಪಮಾನ 20ರಿಂದ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಆಗಾಗ ಬಲವಾದ ಗಾಳಿ ಕೂಡ ಬೀಸಬಹುದು ಎಂದು ಅಂದಾಜಿಸಲಾಗಿದೆ.

ಕರ್ನಾಕದಲ್ಲಿ ಮುಂಗಾರು ಮಳೆ ಇದುವರೆಗೆ ಸಾಮಾನ್ಯಕ್ಕಿಂತಲೂ ಹೆಚ್ಚಾಗಿಯೇ ಬಿದ್ದಿದೆ. ಜೂ.1ರಿಂದ ಇಲ್ಲಿಯವರೆಗೆ ಶೇ.15ರಷ್ಟು ಹೆಚ್ಚು ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಜೂ.1ರಿಂದ 21ರವರೆಗೆ 300 ಎಂಎಂ ಸುರಿದಿದ್ದು, ವರ್ಷದಲ್ಲಿ ಈ ಹೊತ್ತಿಗೆ ಎಷ್ಟು ಪ್ರಮಾಣದ ಮಳೆಯಾಗಬೇಕೋ, ಅದಕ್ಕಿಂತ ಸರಾಸರಿ ಶೇ.120ರಷ್ಟು ಹೆಚ್ಚು ಮಳೆಯಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ; ಕೃಷ್ಣಾ ನದಿ ನೀರಿನ ಹರಿವಿನಲ್ಲಿ ಭಾರಿ ಪ್ರಮಾಣದ ಏರಿಕೆ

Karnataka Weather updates Heavy rains expected in the state today and Tomorrow

Published On - 10:37 am, Thu, 22 July 21

ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ