AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Updates: ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಮಳೆ ಸಾಧ್ಯತೆ

ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Updates: ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಮಳೆ ಸಾಧ್ಯತೆ
ಮಳೆImage Credit source: Dtnext
ನಯನಾ ರಾಜೀವ್
|

Updated on: Mar 19, 2023 | 7:24 AM

Share

ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಬೀದರ್, ನಿರ್ಣಾ, ಶಹಪುರ, ನಿಟ್ಟೂರು, ಜನವಾಡ, ಹುಮನಾಬಾದ್, ಕಮಲಾಪುರ, ಕೋಲಾರ, ಮಾಲೂರು, ಬೆಂಗಳೂರು ಎಚ್​ಎಎಲ್​ ವಿಮಾನ ನಿಲ್ದಾಣ, ಕಲಬುರಗಿ, ಮುಧೋಳ, ತಾಳಿಕೋಟೆ, ಗೋಪಾಲನಗರ, ಹೊಸಕೋಟೆ, ಗೌರಿಬಿದನೂರಿನಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Weather Updates: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಬೀಸಲಿದೆ ಉಷ್ಣಗಾಳಿ

ಪಣಂಬೂರಿನಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬೀದರ್​ನಲ್ಲಿ 12.5 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜಧಾನಿ ದೆಹಲಿಯಲ್ಲಿ ಶನಿವಾರ ಸುರಿದ ಮಳೆ ಬಿಸಿಲಿನ ತಾಪದಿಂದ ಕಂಗಾಲಾಗಿದ್ದ ಜನ ಸಾಮಾನ್ಯರ ಮನ ತಣಿಸಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದಿದ್ದರಿಂದ ವಾತಾವರಣ ತಂಪಾಗಿತ್ತು.

ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಸ ಪಂಜಾಬ್ ಮತ್ತು ಉತ್ತರಾಖಂಡ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಆದರೆ ಅಕಾಲಿಕ ಮಳೆ ವಾಹನ ಸವಾರರ ಸಂಚಾರಕ್ಕೆ ಅಡ್ಡಿಯುಂಟು ಮಾಡಿತು. ಮುಂದಿನ ಎರಡು ದಿನಗಳ ಕಾಲ ದೆಹಲಿ-ಎನ್‌ಸಿಆರ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಹಲವೆಡೆ ಶನಿವಾರ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮಾರ್ಚ್ 21 ರವರೆಗೆ ದೆಹಲಿ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರವೂ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು