Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು 2 ಡಿಗ್ರಿ ಸೆಲ್ಸಿಯಸ್ ​​ತಾಪಮಾನ ಹೆಚ್ಚಳ

Karnataka Temperature: ಈ ಬಾರಿ ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗಿಲ್ಲ. ಬೇಸಿಗೆ ಕಾಲ ಆರಂಭವಾಗುವ ಮುಂಚೆಯೇ ಬಿಸಿಲಿನ ತಾಪಮಾನಕ್ಕೆ ಜನರು ಬಳಲುತ್ತಿದ್ದಾರೆ. ಹಾಗಾದರೆ ರಾಜ್ಯಾದ್ಯಂತ ಇಂದು ಹವಾಮಾನ ಹೇಗಿರಲಿದೆ? ತಾಪಮಾನದಲ್ಲಿ ವೈಪರಿತ್ಯ ಇದೆಯೇ? ಈ ಕುರಿತು ಇಲ್ಲಿದೆ. ಹೌದು ರಾಜ್ಯದಲ್ಲಿ ತಾಪಮಾನ ವೈಪರಿತ್ಯ ಆಗಲಿದೆ. ಇಂದು ಕರ್ನಾಟಕದ ಒಂದೆರಡು ಕಡೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು 2 ಡಿಗ್ರಿ ಸೆಲ್ಸಿಯಸ್ ​​ತಾಪಮಾನ ಹೆಚ್ಚಳ
ತಾಪಮಾನ (ಸಾಂದರ್ಭಿಕ ಚಿತ್ರ)

Updated on: Feb 23, 2024 | 7:58 AM

ರಾಜ್ಯಾದ್ಯಂತ ಮುಂದಿನ 24 ಗಂಟೆ ಒಣಹವೆ ಬೀಸಲಿದೆ. ಇನ್ನು ಕರ್ನಾಟಕದ ಒಂದೆರಡು ಕಡೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್​ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರವಾಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದ್ದು, ಒಂದೆರಡು ಜಿಲ್ಲೆಗಳಲ್ಲಿ ತಾಪಮಾನ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಕೂಡ ಒಣಹವೆ ಬೀಸಲಿದೆ.

ಬಿಸಲು ನಾಡು ಎಂದು ಖ್ಯಾತಿ ಗಳಿಸಿರುವ ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಇಂದು (ಫೆ.23) ಗರಿಷ್ಠ 44 ಮತ್ತು ಕನಿಷ್ಠ 26 ಡ್ರಿಗ್ರಿ ಸೆಲ್ಸಿಯಸ್​ ತಾಪಮಾನ ಇರಲಿದೆ. ಇನ್ನು ಗುಮ್ಮಟ ನಗರಿ ವಿಜಯಪುರದಲ್ಲಿ ಗರಿಷ್ಟ 34 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ