AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಏಪ್ರಿಲ್​ 10ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Karnataka Weather Update: ಸುಡು ಬಿಸಿಲಿಗೆ ಹಿಡಿಶಾಪ ಹಾಕುತ್ತಿರುವವರು ಒಂದು ಮಳೆ ಬರಲಿ ಎಂದು ಕಾಯುತ್ತಿದ್ದಾರೆ. ಹೀಗಾಗಿ ಈಗ ಹವಾಮಾನ ಇಲಾಖೆ ನುಡಿದಿರುವ ಭವಿಷ್ಯ ನಿಜವಾದಲ್ಲಿ ಜನರು ಕೊಂಚ ನಿರಾಳರಾಗಲಿದ್ದಾರೆ.

Karnataka Rain: ಏಪ್ರಿಲ್​ 10ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ
Skanda
| Updated By: Digi Tech Desk|

Updated on:Apr 06, 2021 | 10:14 AM

Share

ಬೆಂಗಳೂರು: ಬಿಸಿಲಿನ ಝಳಕ್ಕೆ ಕಂಗಾಲಾಗಿರುವ ಜನತೆಗೆ ವರುಣ ದರ್ಶನ ಭಾಗ್ಯ ನೀಡುವ ಸಾಧ್ಯತೆ ಇದೆ. ಇಂದಿನಿಂದ ಏಪ್ರಿಲ್ 10ರ ತನಕ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟವನ್ನು ತಲುಪಿದ್ದು, ಜನತೆ ಬೆವರಿ ಬಳಲಿದ್ದಾರೆ. ಸುಡು ಬಿಸಿಲಿಗೆ ಹಿಡಿಶಾಪ ಹಾಕುತ್ತಿರುವವರು ಒಂದು ಮಳೆ ಬರಲಿ ಎಂದು ಕಾಯುತ್ತಿದ್ದಾರೆ. ಹೀಗಾಗಿ ಈಗ ಹವಾಮಾನ ಇಲಾಖೆ ನುಡಿದಿರುವ ಭವಿಷ್ಯ ನಿಜವಾದಲ್ಲಿ ಜನರು ಕೊಂಚ ನಿರಾಳರಾಗಲಿದ್ದಾರೆ.

ಏಪ್ರಿಲ್ 6 ರಂದು ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದ್ದು, ಏಪ್ರಿಲ್ 7 ಹಾಗೂ ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆ ಬೀಳಲಿದೆ ಹಾಗೂ ಏಪ್ರಿಲ್ 9 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ಧಾರವಾಡ, ರಾಯಚೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್​ ತಿಂಗಳು ಪೂರ್ತಿ ಭಾರತದಲ್ಲಿ ತಾಪಮಾನ ಏರುಗತಿಯಲ್ಲೇ ಸಾಗಿದ್ದು, ಕಳೆದ 121 ವರ್ಷಗಳಲ್ಲಿ ಮಾರ್ಚ್​ ತಿಂಗಳಲ್ಲಿ ಮೂರನೇ ಬಾರಿಗೆ ಈ ಪ್ರಮಾಣದ ಉಷ್ಣಾಂಶ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಅಂತೆಯೇ ಕಳೆದ 11 ವರ್ಷಗಳಲ್ಲಿ ಇದು ತಿಂಗಳ ಗರಿಷ್ಠ ತಾಪಮಾನವಾಗಿದ್ದು, ಈ ಬಾರಿಯ ಮಾರ್ಚ್​ನಲ್ಲಿ ದೇಶದಲ್ಲಿ ಸರಾಸರಿ 32.65 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ಇದನ್ನೂ ಓದಿ: ಅಚಾನಕ್ ಸುರಿದ ಗಾಳಿ, ಮಳೆಗೆ ಯಾದಗಿರಿ ನಗರಸಭೆಯ ಮೇಲ್ಚಾವಣಿ ಕುಸಿತ

ಬೆಂಗಳೂರು ಬಿಸಿಲು: ನಗರದಲ್ಲಿ 4 ವರ್ಷಗಳಲ್ಲೇ ಗರಿಷ್ಠ ಉಷ್ಣಾಂಶ ದಾಖಲು

(Weather Updates various districts in Karnataka may get rainfall till April 10th)

Published On - 9:11 am, Tue, 6 April 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ