Karnataka Weather: ಸಂಕ್ರಾಂತಿಯಂದು ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಚಳಿ, ಒಣಹವೆ ಮುಂದುವರಿಕೆ

ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ, ಚಳಿಯೂ ಕೂಡ ಕೊಂಚ ಬಿಡುವು ಪಡೆದಿದೆ, ಎಲ್ಲೆಡೆ ಒಣಹವೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

Karnataka Weather: ಸಂಕ್ರಾಂತಿಯಂದು ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಚಳಿ, ಒಣಹವೆ ಮುಂದುವರಿಕೆ
ಹವಾಮಾನ
Image Credit source: Hindustan Times

Updated on: Jan 15, 2024 | 7:30 AM

ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ, ಚಳಿಯೂ ಕೂಡ ಕೊಂಚ ಬಿಡುವು ಪಡೆದಿದೆ, ಎಲ್ಲೆಡೆ ಒಣಹವೆ ಮುಂದುವರೆದಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ವಿಜಯಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.
ಎಚ್​ಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದೆಲ್ಲೆಡೆ ಶೀತ ಗಾಳಿ, 4 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಎಷ್ಟಿದೆ ತಿಳಿಯಿರಿ
ಮಂಗಳೂರು: 31-24 ಡಿಗ್ರಿ ಸೆಲ್ಸಿಯಸ್
ಶಿವಮೊಗ್ಗ: 31-17 ಡಿಗ್ರಿ ಸೆಲ್ಸಿಯಸ್
ಬೆಳಗಾವಿ: 30-17 ಡಿಗ್ರಿ ಸೆಲ್ಸಿಯಸ್
ಮೈಸೂರು: 31-18 ಡಿಗ್ರಿ ಸೆಲ್ಸಿಯಸ್
ಮಂಡ್ಯ: 31-18 ಡಿಗ್ರಿ ಸೆಲ್ಸಿಯಸ್
ಮಡಿಕೇರಿ: 30-18 ಡಿಗ್ರಿ ಸೆಲ್ಸಿಯಸ್
ರಾಮನಗರ: 31-18 ಡಿಗ್ರಿ ಸೆಲ್ಸಿಯಸ್
ಹಾಸನ: 28-17 ಡಿಗ್ರಿ ಸೆಲ್ಸಿಯಸ್ ಇದೆ.
ಉಡುಪಿ: 31-23 ಡಿಗ್ರಿ ಸೆಲ್ಸಿಯಸ್
ಕಾರವಾರ: 32-22 ಡಿಗ್ರಿ ಸೆಲ್ಸಿಯಸ್
ಚಿಕ್ಕಮಗಳೂರು: 27-16 ಡಿಗ್ರಿ ಸೆಲ್ಸಿಯಸ್
ದಾವಣಗೆರೆ: 31-18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ