AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weekend Curfew: ವೀಕೆಂಡ್ ಕರ್ಫ್ಯೂನಲ್ಲಿ ಯಾವುದಕ್ಕೆಲ್ಲಾ ಅವಕಾಶ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ವಿವರ

ಕರ್ನಾಟಕ ವೀಕೆಂಡ್ ಕರ್ಫ್ಯೂ: ಮನೆಯಿಂದ ಜನರು ಹೊರಗೆ ಬರುವ ಪ್ರಮಾಣ ಕಡಿಮೆ ಆಗಬೇಕು ಎಂಬ ನೆಲೆಯಲ್ಲಿ ಹೋಮ್ ಡೆಲಿವರಿಗೆ ಅವಕಾಶ ನೀಡಲಾಗಿದೆ. ಆದರೆ, ಈ ಎಲ್ಲಾ ಕಾರ್ಯವ್ಯವಸ್ಥೆಯು ಕೊವಿಡ್-19 ನಿಯಮಾನುಸಾರ ನಡೆಯಬೇಕು ಎಂದು ತಿಳಿಸಲಾಗಿದೆ.

Karnataka Weekend Curfew: ವೀಕೆಂಡ್ ಕರ್ಫ್ಯೂನಲ್ಲಿ ಯಾವುದಕ್ಕೆಲ್ಲಾ ಅವಕಾಶ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ವಿವರ
ಕೊರೊನಾ ಕರ್ಫ್ಯೂ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jun 25, 2021 | 6:47 PM

Share

ಬೆಂಗಳೂರು: ಕರ್ನಾಟಕ ಸರ್ಕಾರ ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಘೋಷಿಸಲಾಗಿದೆ. ಬೆಂಗಳೂರು ಹಾಗೂ ಇತರ 19 ಜಿಲ್ಲೆಗಳಲ್ಲಿ ಈ ನಿಯಮ ಇರಲಿದೆ. ಈ ಅವಧಿಯಲ್ಲಿ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅಗತ್ಯ ವಸ್ತು ಖರೀದಿಗೆ ಸಮಯಾವಕಾಶ ನೀಡಲಾಗಿದೆ.

ಜೂನ್ 21ರ ನಂತರ ಕರ್ನಾಟಕ ಸರ್ಕಾರ ಲಾಕ್​ಡೌನ್ ನಿಯಮಾವಳಿಗಳಲ್ಲಿ ಹಲವು ಸಡಿಲಿಕೆಗಳನ್ನು ಮಾಡಿದೆ. ಆದರೂ ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ. ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವಿಕೆಯ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಆಹಾರ ಸಾಮಾಗ್ರಿಗಳ ಅಂಗಡಿ, ದಿನಸಿ ಅಂಗಡಿ, ಹಣ್ಣು, ತರಕಾರಿ ಅಂಗಡಿಗಳು, ಮಾಂಸ, ಮೀನು ಮಾರಾಟ, ಹಾಲು ಹಾಗೂ ಇತರ ಡೈರಿ ಉತ್ಪನ್ನಗಳ ಮಾರುಕಟ್ಟೆಯು ವಾರಾಂತ್ಯದ ಕರ್ಫ್ಯೂ ಅವಧಿಯಲ್ಲೂ ತೆರೆದಿರುತ್ತದೆ. ಶನಿವಾರ ಹಾಗೂ ಭಾನುವಾರ ಕೂಡ ಇವು ತೆರೆದಿರುತ್ತವೆ. ಬೀದಿಬದಿ ವ್ಯಾಪಾರಿಗಳಿಗೂ ಬೆಳಗ್ಗೆ 6 ಗಂಟೆಯಿಂದ 2 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

ಮದ್ಯದ ಅಂಗಡಿಗಳಿಗೆ ಪಾರ್ಸೆಲ್ ನೀಡುವ ವ್ಯವಸ್ಥೆಗೆ ಅವಕಾಶ ನೀಡಲಾಗಿದೆ. ಅದೂ ಕೂಡ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮದ್ಯ ಪಾರ್ಸೆಲ್ ನೀಡುವ ಅವಕಾಶ ಇದೆ. ಅಲ್ಲದೆ, ಎಲ್ಲಾ ರೀತಿಯ ವಸ್ತುಗಳ ಹೋಮ್ ಡೆಲಿವರಿಗೆ ದಿನದ 24 ಗಂಟೆಗಳಲ್ಲೂ ಅವಕಾಶ ನೀಡಲಾಗಿದೆ.

ಮನೆಯಿಂದ ಜನರು ಹೊರಗೆ ಬರುವ ಪ್ರಮಾಣ ಕಡಿಮೆ ಆಗಬೇಕು ಎಂಬ ನೆಲೆಯಲ್ಲಿ ಹೋಮ್ ಡೆಲಿವರಿಗೆ ಅವಕಾಶ ನೀಡಲಾಗಿದೆ. ಆದರೆ, ಈ ಎಲ್ಲಾ ಕಾರ್ಯವ್ಯವಸ್ಥೆಯು ಕೊವಿಡ್-19 ನಿಯಮಾನುಸಾರ ನಡೆಯಬೇಕು ಎಂದು ತಿಳಿಸಲಾಗಿದೆ.

ಹೊಟೇಲ್ ಹಾಗೂ ರೆಸ್ಟೋರೆಂಟ್​ಗಳು ಕೂಡ ವಾರಾಂತ್ಯದ ಕರ್ಫ್ಯೂ ವೇಳೆಯಲ್ಲಿ ತೆರೆಯಲು ಅವಕಾಶ ನೀಡಲಾಗಿದೆ. ಆದರೆ, ಪಾರ್ಸೆಲ್ ಹಾಗೂ ಹೋಮ್ ಡೆಲಿವರಿಗೆ ಅವಕಾಶ ನೀಡಲಾಗಿದೆ. ಹೊಟೇಲ್​ನಲ್ಲಿ ಕುಳಿತು ಆಹಾರ ಸೇವಿಸಲು ಅವಕಾಶ ಇರುವುದಿಲ್ಲ.

ಇದೇ ವೇಳೆ, ಬಸ್, ರೈಲು ಹಾಗೂ ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಸಾರ್ವಜನಿಕ ವಾಹನ ಅಥವಾ ಖಾಸಗಿ ವಾಹನದ ಮೂಲಕ ವಿಮಾನ, ರೈಲು ನಿಲ್ದಾಣಗಳಿಗೆ ಪ್ರಯಾಣಿಸಲು ಕೂಡ ಅವಕಾಶ ನೀಡಲಾಗಿದೆ. ಅದಕ್ಕಾಗಿ ಸೂಕ್ತ ದಾಖಲೆಗಳನ್ನು ತೋರಿಸಿ (ಪ್ರಯಾಣದ ಟಿಕೆಟ್ ಇತ್ಯಾದಿ) ಪ್ರಯಾಣಿಸುವ ಅವಕಾಶ ಕಲ್ಪಿಸಲಾಗಿದೆ.

ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಬಸ್ ನಿಯಮಿತವಾಗಿ ಸಂಚಾರ ನಡೆಸಲಿದೆ ಎಂದು ತಿಳಿಸಿದ್ದಾರೆ. ಮೆಟ್ರೋ ರೈಲು ಸಂಚಾರ ಇರುವುದಿಲ್ಲ ಎಂದೂ ಹೇಳಲಾಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂನಲ್ಲೂ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ; ಜನರ ಅನುಕೂಲಕ್ಕಾಗಿ ಕ್ರಮ

Namma Metro: ಕೋವಿಡ್​ ವೀಕೆಂಡ್‌ ಕರ್ಫ್ಯೂ; ಶುಕ್ರವಾರ ಸಂಜೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸ್ಥಗಿತ

Published On - 6:37 pm, Fri, 25 June 21

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ