AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್​ನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ 45.09 ಲಕ್ಷ ಡೋಸ್ ಲಸಿಕೆ ನೀಡಿಕೆ ಭರವಸೆ

ಕೇಂದ್ರದ ಕೋಟಾದಿಂದ ರಾಜ್ಯಕ್ಕೆ 37.60 ಲಕ್ಷ ಡೋಸ್ ಕೊವಿಶೀಲ್ಡ್, 7.40 ಲಕ್ಷ ಡೋಸ್ ಕೊವ್ಯಾಕ್ಸಿನ್ ಬರಲಿದೆ. ಕರ್ನಾಟಕ ಸರ್ಕಾರದಿಂದ 10.86 ಲಕ್ಷ ಡೋಸ್ ಕೊವಿಶೀಲ್ಡ್, 2.84 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆಗಳು ಲಸಿಕಾ ಕೇಂದ್ರಗಳಿಗೆ ತಲುಪಲಿದೆ.

ಜೂನ್​ನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ 45.09 ಲಕ್ಷ ಡೋಸ್ ಲಸಿಕೆ ನೀಡಿಕೆ ಭರವಸೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 03, 2021 | 4:00 PM

Share

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಜೂನ್ ತಿಂಗಳಲ್ಲಿ 45.09 ಲಕ್ಷ ಡೋಸ್ ಲಸಿಕೆ ಉಚಿತವಾಗಿ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕರ್ನಾಟಕ ಸರ್ಕಾರವು ಲಸಿಕಾ ಕಂಪನಿಗಳಿಂದ ನೇರವಾಗಿ 13.71 ಲಕ್ಷ ಡೋಸ್ ಖರೀದಿ ಮಾಡಲಿದೆ. ಜೂನ್ ತಿಂಗಳಲ್ಲಿ ಒಟ್ಟು ಕರ್ನಾಟಕಕ್ಕೆ 58.80 ಲಕ್ಷ ಡೋಸ್ ಲಸಿಕೆ ಸಿಗಲಿದೆ. ಕೇಂದ್ರದ ಕೋಟಾದಿಂದ ರಾಜ್ಯಕ್ಕೆ 37.60 ಲಕ್ಷ ಡೋಸ್ ಕೊವಿಶೀಲ್ಡ್, 7.40 ಲಕ್ಷ ಡೋಸ್ ಕೊವ್ಯಾಕ್ಸಿನ್ ಬರಲಿದೆ. ಕರ್ನಾಟಕ ಸರ್ಕಾರದಿಂದ 10.86 ಲಕ್ಷ ಡೋಸ್ ಕೊವಿಶೀಲ್ಡ್, 2.84 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆಗಳು ಲಸಿಕಾ ಕೇಂದ್ರಗಳಿಗೆ ತಲುಪಲಿದೆ.

ಕೇಂದ್ರ ಸರ್ಕಾರದಿಂದ ಲಸಿಕೆ ಪೂರೈಕೆಯಾಗುತ್ತಿರುವ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ‘ಜೂನ್ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ಪೂರೈಕೆಯಾಗಲಿರುವ 45 ಲಕ್ಷ ಡೋಸ್ ಲಸಿಕೆ ಮತ್ತು ರಾಜ್ಯ ಸರ್ಕಾರ ಖರೀದಿಸುತ್ತಿರುವ ಲಸಿಕೆ ಪೈಕಿ 13.7 ಲಕ್ಷ ಡೋಸ್ ಸೇರಿದಂತೆ ಒಟ್ಟು 58.71 ಲಕ್ಷ ಡೋಸ್ ಕೊರೊನಾ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಲಿದೆ. ಎಲ್ಲ ಕನ್ನಡಿಗರಿಗೂ ಲಸಿಕೆ ಒದಗಿಸಲು ಕೇಂದ್ರ ಸರ್ಕಾರ ನೀಡುತ್ತಿರುವ ನಿರಂತರ ಸಹಕಾರ ಶ್ಲಾಘನೀಯ’ ಎಂಸು ಸುಧಾಕರ್ ಹೇಳಿದ್ದಾರೆ.

‘ಭಾರತದಲ್ಲಿ ಅತ್ಯಂತ ವೇಗವಾಗಿ ಲಸಿಕೆ ನೀಡಲಾಗುತ್ತಿರುವ ನಗರಗಳಲ್ಲಿ ಬೆಂಗಳೂರು ಸೇರಿದೆ. ಈವರೆಗೆ 28.3 ಲಕ್ಷ ಜನರಿಗೆ ಒಂದು ಡೋಸ್​ ಆದರೂ ಲಸಿಕೆ ಸಿಕ್ಕಿದೆ. ನಗರದ ಶೇ 28.6ರಷ್ಟು ಜನರಿಗೆ ಲಸಿಕೆ ಸಿಕ್ಕಿದೆ’ ಎಂದು ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ನಿನ್ನೆ ರಾತ್ರಿ 11.45ಕ್ಕೆ ಗುಜರಾತಿನ ಜಾಮ್​ನಗರದಿಂದ 110.83 ಟನ್ ಆಕ್ಸಿಜನ್ ಹೊತ್ತ ರೈಲು ಬೆಂಗಳೂರಿಗೆ ಬಂದಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ‘ಸಕಾಲಕ್ಕೆ ಆಕ್ಸಿಜನ್ ಪೂರೈಸುವ ಮೂಲಕ ಈ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳ ಕೈಹಿಡಿದಿದೆ’ ಎಂದು ಸುಧಾಕರ್ ಹೇಳಿದ್ದಾರೆ.

(Karnataka will receive 45 lakh dose of covid vaccine in June month says health minister Dr K Sudhakar)

ಇದನ್ನೂ ಓದಿ: ಜೂನ್ ತಿಂಗಳಲ್ಲಿ ರಾಜ್ಯದ 60 ಲಕ್ಷಕ್ಕೂ ಹೆಚ್ಚು ಜನರಿಗೆ ಕೊವಿಡ್ ಲಸಿಕೆ ವಿತರಿಸಲು ಸಿದ್ಧತೆ: ಸಿಎಂ ಯಡಿಯೂರಪ್ಪ

ಇದನ್ನೂ ಓದಿ: ಸೆರಮ್, ಭಾರತ್ ಬಯೋಟೆಕ್ ನಂತರ ಕೊವಿಡ್ ಲಸಿಕೆ ತಯಾರಿಸಲಿದೆ ಬಯೋಲಾಜಿಕಲ್ ಇ; ಹೇಗಿದೆ ಸಿದ್ಧತೆ?

Published On - 3:56 pm, Thu, 3 June 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ